ಉಡುಪಿ:ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಣಿಪಾಲ್ ಪ್ರಧಾನ ಅಂಚೆ ಕಚೇರಿಯಲ್ಲಿ ಯೋಗ ಕಾರ್ಯಕ್ರಮವನ್ನು ನಡೆಸಲಾಯಿತು.
ಮಾಜಿ ಸೈನಿಕ ಹಾಗೂ ಉಡುಪಿ ದಕ್ಷಿಣ ಅಂಚೆ ಉಪ ವಿಭಾಗದ ಸಹಾಯಕ ಅಧೀಕ್ಷಕ ಕೃಷ್ಣರಾಜ ವಿಠ್ಠಲ ಭಟ್ ಯೋಗ ಗುರುವಾಗಿ ಶಿಬಿರ ನಡೆಸಿದರು. ಅಂಚೆ ಕಚೇರಿಯ ಸಿಬ್ಬಂದಿಗಳು ಸಕ್ರಿಯರಾಗಿ ಭಾಗವಹಿಸಿದರು. ಪ್ರಧಾನ ಅಂಚೆ ಪಾಲಕ ಗುರುಪ್ರಸಾದ್ ಗುರು ವಂದನೆಗೈದರು.












