ಉಡುಪಿ: ಧಾರ್ಮಿಕ ದತ್ತಿ , ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಉಡುಪಿ ಜಿಲ್ಲಾ ಪ್ರವಾಸ ಮಾಡಿದ್ದಾರೆ. ಕುಂದಾಪುರ ತಾಲೂಕಿನ ಕೋಟೇಶ್ವರದ ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿಕೊಟ್ಟು ದೇವರಿಗೆ ವಿಶೇಷ ಪೂಜೆ ಅರ್ಪಿಸಿ, ಪ್ರಸಾದ ಸ್ವೀಕರಿಸಿದರು.
ಸ್ವಚ್ಛ ಭಾರತ ಯೋಜನೆಯ ಅಭಿಯಾನದಡಿ ,ದೇಗುಲದ ಆವರಣದಲ್ಲಿ ಭಕ್ತರಿಗೆ ಕೋಟೇಶ್ವರ ಸೇವಾ ಟ್ರಸ್ಟ್ ನಿರ್ಮಿಸಿದ ಕಚೇರಿ ಮತ್ತು ಶೌಚಾಲಯವನ್ನು ಉದ್ಘಾಟನೆ ಮಾಡಿದರು. ರಾಜ್ಯದ ಎಲ್ಲಾ ದೇಗುಲಾದ ಆವರಣದಲ್ಲಿ ಭಕ್ತರಿಗೆ ಅನುಕೂಲವಾಗುವಂತಹ ಮೂಲಭೂತ ಸೌಕರ್ಯಗಳು, ಯೋಜನೆಗಳು ಭಕ್ತರಿಗೆ ಸಿಗಬೇಕು ಎಂದು ರಾಮಲಿಂಗಾ ರೆಡ್ಡಿ ಹೇಳಿದರು.

ಈ ಸಂದರ್ಭದಲ್ಲಿ ಕುಂದಾಪುರ ಬೈಂದೂರಿನ ಗ್ರಾಮೀಣ ಭಾಗದಲ್ಲಿ ಹೆಚ್ಚುವರಿ ಸರಕಾರಿ ಬಸ್ಸುಗಳನ್ನು ಓಡಿಸಿ ಎಂದು ಸಚಿವರಿಗೆ ವಿದ್ಯಾರ್ಥಿಗಳು ಮನವಿ ಮಾಡಿಕೊಂಡರು.












