ನವದೆಹಲಿ: ಕರ್ನಾಟಕದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ 2025–26ನೇ ಸಾಲಿನಲ್ಲಿ ₹880 ಕೋಟಿ ಹಂಚಿಕೆ ಮಾಡಿ ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಆದೇಶ ಹೊರಡಿಸಿದೆ.
ಈ ಮೊತ್ತವನ್ನು ಮಂಜೂರಾದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಮಾತ್ರ ಬಳಸಬೇಕು. ಯಾವುದೇ ಹೆದ್ದಾರಿ ಯೋಜನೆಗೆ ಮಂಜೂರಾದ ಮೊತ್ತಕ್ಕಿಂತ ಹೆಚ್ಚುವರಿ ಹಣ ಬಳಕೆ ಮಾಡುವಂತಿಲ್ಲ ಎಂದು ಸಚಿವಾಲಯ ಷರತ್ತು ವಿಧಿಸಿದೆ.












