ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಿಂದ ಉಚಿತ ಗಿಡ ವಿತರಣೆ ಕಾರ್ಯಕ್ರಮ

ಉಡುಪಿ: ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ವತಿಯಿಂದ ಉಚಿತವಾಗಿ ಗಿಡಗಳ ವಿತರಣಾ ಕಾರ್ಯಕ್ರಮವನ್ನು ಶ್ರೀ ಉಮಾಮಹೇಶ್ವರ ಸಭಾಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ‌ ಮಾತನಾಡಿ, ಪ್ರಕೃತಿ ಇದ್ದರೆ ಮನುಷ್ಯ ಜೀವಿಸಲು ಸಾಧ್ಯ. ಪ್ರತಿಯೊಂದು ಸಂದರ್ಭದಲ್ಲಿ ಪ್ರಕೃತಿ ನಮ್ಮ ಜೊತೆ ಇರುತ್ತದೆ. ನಾವು ಅದನ್ನು ರಕ್ಷಿಸುವ ಕೆಲಸ ಮಾಡಬೇಕು ಎಂದರು.

ಉದ್ಯಾವರ, ಅಲೆವೂರು, ಆತ್ರಾಡಿ, 80 ಬಡಗಬೆಟ್ಟು ಗ್ರಾಮಗಳು ಶೀಘ್ರವೇ ಮಹಾನಗರ ಪಾಲಿಕೆಯಾಗಿ ಘೋಷಣೆಯಾಗಲಿದೆ‌. ಮಹಾನಗರ ಪಾಲಿಕೆ ಆದ ಬಳಿಕ ನಗರದ ಜನತೆಗೆ ಕುಡಿಯುವ ನೀರು, ಹೆಚ್ಚಿನ ಅನುದಾನ ದೊರೆಯಲಿದೆ. ರಾಜ್ಯದ ಗ್ರಾಮೀಣಾಭಿವೃದ್ಧಿ ‌ಇಲಾಖೆ, ಹಣಕಾಸಿನ ಇಲಾಖೆ ಮಹಾನಗರ ಪಾಲಿಕೆ ಆಗುವ ಬಗ್ಗೆ ಅನುಮೋದನೆ ನೀಡಿದೆ. ರಾಜ್ಯ ಸರಕಾರದ ವಿಶೇಷ ಅಧಿವೇಶನದಲ್ಲಿ ಘೋಷಣೆ ಒಂದೇ ಬಾಕಿ ಎಂದು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕಂಬಳ ಮನೆ ದಿನೇಶ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ಅಲೆವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ, ಜಿಲ್ಲಾ ಕೃಷಿಕ‌ ಸಂಘದ ಅಧ್ಯಕ್ಷ ಬಂಟಕಲ್ ರಾಮಕೃಷ್ಣ ಶರ್ಮ, ತ್ರಿಶಾ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಗೋಪಾಲ ಕೃಷ್ಣ ರಾವ್, ಸಾಮಾಜಿಕ ಅರಣ್ಯ ಇಲಾಖೆಯ ಪ್ರತ್ಯಕ್ಷ ಕಾಮತ್, ಪಂಚಾಯತ್ ಸದಸ್ಯ ಸುಧಾಕರ್ ಪೂಜಾರಿ, ಶಂಕರ್ ಜಿ.ದೇವಾಡಿಗ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶೇಖರ್ ಸುವರ್ಣ ಪಾಂಡುರಂಗ ನಾಯ್ಕ್, ಉಮೇಶ್ ಮಾರ್ಪಳ್ಳಿ, ಶಂಕರ ಆಚಾರ್ಯ, ಚಂದ್ರಾವತಿ, ಅನಂತ ರಾವ್ ಉಪಸ್ಥಿತರಿದ್ದರು. ಲಕ್ಷ್ಮೀನಾರಾಯಣ ರಾವ್ ಸ್ವಾಗತಿಸಿ, ವಿಜಯಲಕ್ಷ್ಮಿ ಎಂ ವಂದಿಸಿದರೆ, ವಿಷ್ಣುಮೂರ್ತಿ ಉಪಾಧ್ಯಾಯ ಕಾರ್ಯಕ್ರಮ ನಿರೂಪಿಸಿದರು.