ಉಡುಪಿ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಮೆಮೋರಿಯಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಎಂ.ಸಿ.ಎ ವಿಭಾಗದ ಸಹಪ್ರಾಧ್ಯಾಪಿಕೆಯಾಗಿರುವ ಪ್ರವೀಣ ಕುಮಾರಿ ಎಂ.ಕೆ. ಅವರು ಮಂಡಿಸಿರುವ “Advanced Data Analytics Model for Intelligent Transport System in Smart City” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್.ಡಿ ಪದವಿ ನೀಡಿದೆ.
ಅವರು ಮಂಗಳೂರು ವಿಶ್ವವಿದ್ಯಾನಿಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಚೇರ್ಮನ್ ಹಾಗೂ ಸೀನಿಯರ್ ಪ್ರೊಫೆಸರ್ ಮಂಜಯ್ಯ ಡಿ.ಎಚ್. ಅವರ ಮಾರ್ಗದರ್ಶನದಲ್ಲಿ ಈ ಪ್ರಬಂಧವನ್ನು ಸಿದ್ಧಪಡಿಸಿದ್ದರು. ಪ್ರವೀಣ ಕುಮಾರಿ ಎಂ.ಕೆ. ಅವರು ಪುತ್ತೂರು ಕೃಷ್ಣನಗರ ನಿವಾಸಿ, ನಿವೃತ್ತ P.S.I ಪಿ. ಎಮ್. ಕೃಷ್ಣ ನಾಯ್ಕ್ ಹಾಗೂ ಯಶೋದಾ ಕೃಷ್ಣ ಇವರ ಪುತ್ರಿ. ಇವರ ಪತಿ ನಾರಾಯಣ ಬಡೆಕ್ಕಿಲ ಉಡುಪಿ ಕೋ ಆಪರೇಟಿವ್ ಟೌನ್ ಬ್ಯಾಂಕಿನ ಪ್ರಧಾನ ಕಚೇರಿಯ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.












