ಉಡುಪಿ:ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ ಕರ್ನಾಟಕ ಆಯ್ಕೆಗೆ ಅರ್ಜಿ ಆಹ್ವಾನ

ಉಡುಪಿ:ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ” ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.

ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ “ಅಸ್ಪೃಶ್ಯತೆ ನಿವಾರಣೆ”, “ಅಹಿಂಸೆ”, “ಮಹಿಳಾ ಸಬಲೀಕರಣ”, “ಗ್ರಾಮೀಣ ನೈರ್ಮಲ್ಯ”, “ಮದ್ಯಪಾನ ವಿರೋಧಿ ನೀತಿ”, “ಖಾದಿ ಮತ್ತು ಸ್ವದೇಶಿವಸ್ತು ಬಳಕೆ”, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ”, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.

ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ.ಅರ್ಜಿಗಳನ್ನು 2025 ನೇ ಸೆಪ್ಟೆಂಬರ್ 19 ರ ಒಳಗಾಗಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ. ನಂ. 17. ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು – 560 001 ಅಥವಾ ಇ-ಮೇಲ್ ವಿಳಾಸ [email protected] ಹಾಗೂ ಖುದ್ದಾಗಿ ಇಲಾಖೆಗೆ ಕಳುಹಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.