ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ಆಕಾಂಕ್ಷಿಗಳಿಗೆ ಶೀಘ್ರದಲ್ಲೇ ಗುಡ್ ನ್ಯೂಸ್: ವಯೋಮಿತಿಯನ್ನು ಸಡಿಲಿಸುವ ಬಗ್ಗೆ ಸರಕಾರ ಯೋಚನೆ

ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ಆಕಾಂಕ್ಷಿಗಳಿಗೆ ಶೀಘ್ರದಲ್ಲೇ ಸರಕಾರ ಗುಡ್ ನ್ಯೂಸ್ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಸುಳಿವು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ನಡೆದಿಲ್ಲದ ಕಾರಣ, ಯುವಜನರಲ್ಲಿ ಈ ಬಗ್ಗೆ ಬಹಳಷ್ಟು ಆಕ್ರೋಶವಿತ್ತು. ಈ ಹಿನ್ನೆಲೆಯಲ್ಲಿ, ವಯೋಮಿತಿಯನ್ನು ಸಡಿಲಿಸುವ ಬಗ್ಗೆ ಪರಿಶೀಲಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಬೇರೆ ರಾಜ್ಯಗಳಲ್ಲಿರುವ ವಯೋಮಿತಿ ನೀತಿಗಳನ್ನು ಅಧ್ಯಯನ ಮಾಡಿ, ಸೂಕ್ತವಾದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಪ್ರಸ್ತಾವನೆ ಸರ್ಕಾರದ ಅನುಮೋದನೆ ಪಡೆದ ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಸರಕಾರದ ಈ ಯೋಚನೆ ಕಾರ್ಯಗತವಾದರೆ ರಾಜ್ಯದ ಲಕ್ಷಾಂತರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಆಕಾಂಕ್ಷಿಗಳ ಕನಸು ಈಡೇರುವ ಸಾಧ್ಯತೆ ಇದೆ.