ಬೆಂಗಳೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆ (IRCS, K58) ಮತ್ತು ರೋಟರಿ
ಬೆಂಗಳೂರು ಉದ್ಯೋಗಗಳ ಸಹಯೋಗದಲ್ಲಿ, ರೋಟರಿ ಉದ್ಯೋಗ್ ರೆಡ್ ಕ್ರಾಸ್ ರಕ್ತ ಕೇಂದ್ರವನ್ನು ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕೆಎಲ್ಇ (ರವಿ ಕಿರ್ಲೋಸ್ಕರ್) ಆಸ್ಪತ್ರೆಯಲ್ಲಿ ಇಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮವನ್ನು ಗೌರನಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹೋಟ್ ಗಿಡಕ್ಕೆ ನೀರೆರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಕ್ತದ ಅವಶ್ಯಕತೆ ಮತ್ತು ಸುರಕ್ಷಿತ ರಕ್ತಸಂಗ್ರಹಣೆಯ ಮಹತ್ವವನ್ನು ವಿವರಿಸಿಸಿ, ರೋಟರಿ ಮತ್ತು ರೆಡ್ಕ್ರಾಸ್ ಸಂಸ್ಥೆಗಳ ಸಮಾಜಮುಖಿ ಸೇವೆಯನ್ನು ಶ್ಲಾಘಿಸಿದರು.

ರೋಟರಿಯನ್ ಎಲಿಜಬೆತ್ ಚೆರಿಯನ್, ರೋಟರಿ ಉದ್ಯೋಗ್ ಯೋಜನೆ ಕುರಿತು ವಿವರಿಸಿದರು.ಈ ಸಂದರ್ಭದಲ್ಲಿ ಪಿ. ಜಯಶಂಕರ್ ಹಾಗೂ ಎಸ್. ರವಿರಾಜ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರೆಡ್ಕ್ರಾಸ್ ರಾಜ್ಯ ಶಾಖೆಯ ಉಪಸಭಾಪತಿ ಶ್ರೀನಿವಾಸ್ ಹ್ಯಾಟಿ, ಕೆಎಲ್ಇ ಸೊಸೈಟಿ ಅಧ್ಯಕ್ಷ ಪ್ರಭಾಕರ ಕೋರೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಐ.ಆರ್.ಸಿಎಸ್ – ಕೆ.ಎಸ್.ಬಿ ಅಧ್ಯಕ್ಷ ಬಸ್ರೂರು ರಾಜೀವ್ ಶೆಟ್ಟಿ ಸ್ವಾಗತಿಸಿ, ಐ.ಆರ್.ಸಿಎಸ್ – ಕೆ.ಎಸ್.ಬಿ ಉಪಾಧ್ಯಕ್ಷ ಭಾಸ್ಕರ್ ರಾವ್
ವಂದಿಸಿದರು.












