ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಖಂಬದಕೋಣೆ ಸೇತುವೆಗೆ ಕಂಟೈನರ್ವೊಂದು ಡಿಕ್ಕಿ ಹೊಡೆದಿದ್ದು, ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದಂತಾಗಿದೆ.
ಕಂಟೈನರ್ ಡಿಕ್ಕಿ ಹೊಡೆದ ರಭಸಕ್ಕೆ ನದಿಗೆ ಉರುಳುವ ಸಾಧ್ಯತೆ ಇದ್ದು, ಅದೃಷ್ಟವಶಾತ್ ಪಾರಾಗಿದೆ.ಕಂಟೈನರ್ ಮಂಗಳೂರಿನಿಂದ ಗೋವಾ ಕಡೆಗೆ ಸಾಗುತ್ತಿದ್ದು, ಕಂಟೈನರ್ನಲ್ಲಿದ್ದ ಚಾಲಕ ಹಾಗೂ ಕೀನರ್ ಅಪಾಯದಿಂದ ಪಾರಾಗಿದ್ದಾರೆ.


















