ಉಡುಪಿ:ಅ.3 ರಂದು ಶಾರದೋತ್ಸವ ವಿಸರ್ಜನಾ ಮೆರವಣಿಗೆ – ಮದ್ಯ ಮಾರಾಟ ನಿಷೇಧ

ಉಡುಪಿ: ನವರಾತ್ರಿ ಹಬ್ಬದ ಪ್ರಯುಕ್ತ ಅಕ್ಟೋಬರ್ 3 ರಂದು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಸೇವಾ ಸಂಘ(ರಿ) ಗಂಗೊಳ್ಳಿ ರವರ ವತಿಯಿಂದ 51 ನೇ ವರ್ಷದ ಶಾರದೋತ್ಸವ ವಿಸರ್ಜನಾ ಮೆರವಣಿಗೆ ನಡೆಯಲಿದ್ದು ಸದ್ದಿ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದು, ಪ್ರಮುಖ ಕೋಮು ಸೂಕ್ಷ್ಮ ಸ್ಥಳಗಳ ಮೂಲಕ ಮೆರವಣಿಗೆಯು ಹಾದು ಹೋಗಲಿರುವ ಹಿನ್ನೆಲೆ, ಸದರಿ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ, ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ನಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಳ್ಳಿ, ಮತ್ತು ಗುಜ್ಜಾಡಿ ಗ್ರಾಮಗಳ ವ್ಯಾಪಿಯಲ್ಲಿ ಅಕ್ಟೋಬರ್ 3 ರಂದು ಬೆಳಿಗೆ, 6.00 ಗಂಟೆಯಿಂದ ರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳ ಮದ್ಯ ಮಾರಾಟವನ್ನು ನಿಷೇಧಿಸಿ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಜಿಲ್ಲಾ ದಂಡಾಧಿಕಾರಿಯು ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅದೇಶಿಸಿರುತ್ತಾರೆ.