ವಿವಿಧ ನಿಗಮಗಳೊಂದಿಗೆ ಶಾಸಕ ಮಂಜುನಾಥ ಭಂಡಾರಿ ಚರ್ಚೆ: ನಿಗಮದ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ

ಮಂಗಳೂರು: ಶಾಸಕರಾದ ಮಂಜುನಾಥ ಭಂಡಾರಿ ಅವರು ವಿವಿಧ ನಿಗಮಗಳು, ಪ್ರಾಧಿಕಾರಗಳು ಹಾಗೂ ಅಕಾಡೆಮಿಗಳ ಅಧ್ಯಕ್ಷರುಗಳೊಂದಿಗೆ ಅ.07 ರಂದು ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು. ನಿಗಮ, ಪ್ರಾಧಿಕಾರ ಹಾಗೂ ಅಕಾಡೆಮಿಗಳಲ್ಲಿ ಎದುರಾಗುವ ಯಾವುದೇ ಸಮಸ್ಯೆಗಳಿಗೆ ಸರ್ಕಾರದಿಂದ ಸಿಗುವ ಪರಿಹಾರ ಒದಗಿಸುವ ಭರವಸೆ ನೀಡಿದರು. ನಿಗಮಗದ ಅಧ್ಯಕ್ಷರುಗಳು ಸರ್ಕಾರದ ಅಧಿಕಾರಿಗಳು ಹಾಗೂ ಜನರೊಂದಿಗೆ ಸ್ಪಂದನಾಶೀಲವಾಗಿ ಸಮನ್ವಯತೆಯಿಂದ ವರ್ತಿಸಬೇಕೆಂದು ಸಲಹೆ ನೀಡಿದರು. ಪಕ್ಷವೂ ತಮ್ಮನ್ನು ಗುರುತಿಸಿ ನೀಡಿರುವ ಸ್ಥಾನಮಾನಗಳಿಗೆ ಪ್ರತಿಯಾಗಿ ಪಕ್ಷದ ಸಂಘಟನೆಯ ಬಲವರ್ಧನೆಗಾಗಿ ಪ್ರತಿಯೊಬ್ಬ ಅಧ್ಯಕ್ಷರು ಹೆಚ್ಚು ಸಮಯ ಮೀಸಲಿಡಬೇಕೆಂದು ಸೂಚಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಮೆಸ್ಕಾಂ ಅಧ್ಯಕ್ಷರಾದ ಕೆ ಹರೀಶ್ ಕುಮಾರ್ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿಯಾದ ಪದ್ಮರಾಜ್ ಪೂಜಾರಿ ಸೇರಿದಂತೆ ವಿವಿಧ ನಿಗಮ ಪ್ರಾಧಿಕಾರ ಹಾಗೂ ಅಕಾಡೆಮಿಯ ಅಧ್ಯಕ್ಷರುಗಳು ಉಪಸ್ಥಿತರಿದ್ದರು.