ಉಡುಪಿ:ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ನೊಂದಣಿ ಬಿಟ್ಟು ಹೋದಲ್ಲಿ ಸಹಾಯವಾಣಿಗೆ ಕರೆ ಮಾಡಲು ಸೂಚನೆ

ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.22ರಿಂದ ಪ್ರಾರಂಭಿಸಿದ್ದು, ಸಮೀಕ್ಷೆ ಕಾರ್ಯ ಪೂರ್ಣಗೊಳ್ಳದ ಕಾರಣ ಸರಕಾರದ ಆದೇಶದಂತೆ ಅ.18ರವರೆಗೆ ಸಮೀಕ್ಷೆ ಕಾರ್ಯವನ್ನು ಮುಂದೂಡಲಾಗಿದೆ.

ಈ ಸಮೀಕ್ಷೆ ಸಮಯದಲ್ಲಿ ಸಮೀಕ್ಷೆದಾರರು ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡದೆ ಬಿಟ್ಟು ಹೋದಲ್ಲಿ ರಾಜ್ಯ ಮಟ್ಟದ ಸಹಾಯವಾಣಿ – 8050770004, ಜಿಲ್ಲಾ ಮಟ್ಟದ ಸಹಾಯವಾಣಿ- 0820-2574881, ಉಡುಪಿ/ಬ್ರಹ್ಮಾವರ/ಕಾಪು ಮಟ್ಟದ ಸಹಾಯವಾಣಿ 0820-2520739, ಬೈಂದೂರು/ಕುಂದಾಪುರ- 9972294198, ಕಾರ್ಕಳ-ಹೆಬ್ರಿ- 08258- 298610 ಸಹಾಯವಾಣಿಗೆ ಕಚೇರಿ ಅವಧಿಯಲ್ಲಿ ಕರೆ ಮಾಡಿದಲ್ಲಿ ಸಮೀಕ್ಷೆದಾರರನ್ನು ಮನೆಗೆ ಕಳುಹಿಸಿ ಸಮೀಕ್ಷೆ ಕಾರ್ಯ ನಡೆಸಲಾಗುವುದು.

ಕುಟುಂಬದ ಸದಸ್ಯರು ತಮ್ಮ ಮೊಬೈಲ್/ಲ್ಯಾಪ್‌ಟಾಪ್‌ನಲ್ಲಿ – https://kscbcseldeclaration.karnataka.gov.in – ಲಿಂಕ್ ಮೂಲಕ ಸ್ವಯಂ ನೋಂದಣಿಯನ್ನು ಸಹ ಮಾಡಿಕೊಳ್ಳಬಹುದು ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.