ಉಡುಪಿ: ರಜತ ಮಹೋತ್ಸವ ಸಂಭ್ರಮದಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ಟೆಂಪಲ್ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘ ಮತ್ತು ರಜತ ಮಹೋತ್ಸವ ಸಮಿತಿ ಆಶ್ರಯದಲ್ಲಿ ಕಾಲೇಜಿನ ಆವರಣದಲ್ಲಿ ಶನಿವಾರ 70 ನೇ ಕರ್ನಾಟಕ ರಾಜ್ಯೋತ್ಸವದ ಸಂಭ್ರಮವನ್ನು ಆಚರಿಸಲಾಯಿತು.
ಮಂದಾರ್ತಿ ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ಎಚ್.ಧನಂಜಯ ಶೆಟ್ಟಿ ಅವರು ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರ ಪುಷ್ಪ ನಮನ ಸಲ್ಲಿಸಿದರು. ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಹಳೆ ವಿದ್ಯಾರ್ಥಿ ಸಂಘದಿಂದ ಪದಾಧಿಕಾರಿಗಳು ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು.

ಕಾಲೇಜಿನ ಆವರಣದಲ್ಲಿ ರಜತ ಮಹೋತ್ಸವಕ್ಕೆ ಸಂಬಂಧಿಸಿ ರಜತ ಮಹೋತ್ಸವದ ಎಲ್ಲಾ ಉಪ ಸಮಿತಿಯ ಸದಸ್ಯರೊಂದಿಗೆ ಕಾರ್ಯಕ್ರಮ ಆಯೋಜನೆಯ ಬಗ್ಗೆ ಚರ್ಚಿಸಲಾಯಿತು. 2025 ರ ಡಿಸೆಂಬರ್ 26 ರ ರಜತ ಸಂಭ್ರಮ ಕಾರ್ಯಕ್ರಮದ ಮಾದರಿ ರೂಪುರೇಷೆಯನ್ನು ರಚಿಸಲಾಯಿತು.
ಕಾಲೇಜಿನ ಪ್ರಿನ್ಸಿಪಾಲ್ ಪ್ರವೀಣ್ ಶೆಟ್ಟಿ, ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರಿಯದರ್ಶನ್ ಶೆಟ್ಟಿ, ಉಪನ್ಯಾಸಕರು ಹಾಗೂ ಹಳೆ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ರಜತ ಸಂಭ್ರಮದ ಮನವಿ ಪತ್ರವನ್ನು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ ಮುದ್ದುಮನೆ, ಕಾರ್ಯದರ್ಶಿ ನಂದೀಶ್ ಶೆಟ್ಟಿ ಬಿಲ್ಲಾಡಿ, ಶ್ರೀನಿವಾಸ್ ಶೆಟ್ಟಿ ಆವರ್ಸೆ, ಗ್ರಾ.ಪಂ. ಸದಸ್ಯ ಪ್ರವೀಣ್ ಶೆಟ್ಟಿ, ಉದ್ಯಮಿ ಎಚ್. ಪ್ರಮೋದ್ ಶೆಟ್ಟಿ, ಮಂದಾರ್ತಿ ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕಡೆಕಾರ್ಮನೆ ಉಪಸ್ಥಿತರಿದ್ದರು.

















