ದಕ್ಷಿಣ ಭಾರತದ ಸಿನಿರಂಗದಲ್ಲಿ ಬಹಳ ದಿನಗಳಿಂದ ಕೇಳಿಬರುತ್ತಿದ್ದ ಒಂದು ದೊಡ್ಡ ಗಾಸಿಪ್ ಇದೀಗ ಬ್ರೇಕಿಂಗ್ ನ್ಯೂಸ್ ಆಗಿ ಹೊರಬಿದ್ದಿದೆ. ಸ್ಟಾರ್ ನಟ ವಿಜಯ್ ದೇವರಕೊಂಡ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರ ಮದುವೆಗೆ ಮುಹೂರ್ತ ಫಿಕ್ಸ್ ಆಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.
2026ರ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿಜಯ್–ರಶ್ಮಿಕಾ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದೆ ಎಂದು ಹೇಳಲಾಗುತ್ತಿದೆ. ರಾಜಸ್ಥಾನದ ಐತಿಹಾಸಿಕ ಅರಮನೆಯಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ಶೈಲಿಯಲ್ಲಿ ಈ ಮದುವೆ ನಡೆಯಲಿದೆ ಎಂಬ ಮಾಹಿತಿ ವೈರಲ್ ಆಗಿದೆ.
ಇತ್ತೀಚೆಗೆ ಈ ಜೋಡಿ ಬಹಳ ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಕೂಡ ಚಿತ್ರರಂಗದಲ್ಲಿ ಹರಿದಾಡುತ್ತಿದೆ. ಅಕ್ಟೋಬರ್ 3ರಂದು ಈ ನಿಶ್ಚಿತಾರ್ಥ ನಡೆದಿದ್ದು, ಕುಟುಂಬದ ಕೆಲವೇ ಸದಸ್ಯರು ಮಾತ್ರ ಭಾಗವಹಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ವಿಜಯ್ ದೇವರಕೊಂಡ ಅಥವಾ ರಶ್ಮಿಕಾ ಮಂದಣ್ಣ ಇಬ್ಬರೂ ಸಹ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಫೋಟೋ ಅಥವಾ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.
ನಿಶ್ಚಿತಾರ್ಥದ ನಂತರವೂ ಇಬ್ಬರೂ ತಮ್ಮ ತಮ್ಮ ಸಿನಿಮಾಗಳ ಶೂಟಿಂಗ್ ಮತ್ತು ಪ್ರೊಫೆಷನಲ್ ಕಮಿಟ್ಮೆಂಟ್ಗಳಲ್ಲಿ ನಿರತರಾಗಿದ್ದಾರೆ. ಆದರೂ, ಅವರ ಮದುವೆ ಕುರಿತು ಹಲವು ದಿನಾಂಕಗಳು ಈ ಹಿಂದೆ ಹರಿದಾಡುತ್ತಿದ್ದವು. ಇದೀಗ, ಫೆಬ್ರವರಿ 26 ಎಂಬ ದಿನಾಂಕ ಫಿಕ್ಸ್ ಆಗಿದೆ ಎಂಬ ಸುದ್ದಿ ಅಭಿಮಾನಿಗಳಿಗೆ ಸಂತಸ ತಂದಿದೆ.
ವಿಜಯ್–ರಶ್ಮಿಕಾ ಮದುವೆ ಉದಯಪುರದ ಅರಮನೆ ಅಥವಾ ಲಕ್ಸುರಿ ಪ್ಯಾಲೇಸ್ ಹೋಟೆಲ್ನಲ್ಲಿ ನಡೆಯುವ ಸಾಧ್ಯತೆ ಇದೆ. ನಿಶ್ಚಿತಾರ್ಥದಂತೆಯೇ, ಮದುವೆಯೂ ಕೂಡ ಅತಿ ಕಡಿಮೆ ಜನರ ಉಪಸ್ಥಿತಿಯಲ್ಲಿ, ಸದ್ದಿಲ್ಲದೆ ಹಾಗೂ ಖಾಸಗಿಯಾಗಿ ನಡೆಯಲಿದೆ ಎಂದು ತಿಳಿದುಬಂದಿದೆ.

ಕುಟುಂಬದ ಸದಸ್ಯರು, ಆಪ್ತ ಸ್ನೇಹಿತರು ಮತ್ತು ಕೆಲವೇ ಚಿತ್ರರಂಗದ ಗಣ್ಯರು ಮಾತ್ರ ಈ ವಿವಾಹಕ್ಕೆ ಆಹ್ವಾನಿತರಾಗಲಿದ್ದಾರೆ ಎನ್ನಲಾಗಿದೆ. ಮದುವೆ ಬಗ್ಗೆ ಅಧಿಕೃತ ಘೋಷಣೆ ಶೀಘ್ರದಲ್ಲೇ ಬರಲಿದೆ ಎಂಬ ನಿರೀಕ್ಷೆ ಇದೆ.
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಚಿತ್ರ ಭರ್ಜರಿ ಯಶಸ್ಸು ಕಂಡು, ಇಬ್ಬರ ಜೋಡಿಗೂ ಅಪಾರ ಜನಪ್ರಿಯತೆ ತಂದಿತ್ತು. ಆ ನಂತರ ‘ಡಿಯರ್ ಕಾಮ್ರೇಡ್’ ಸಿನಿಮಾದಲ್ಲಿಯೂ ಈ ಜೋಡಿ ಮತ್ತೆ ಒಂದಾಗಿದ್ದು, ಅವರ ಆನ್-ಸ್ಕ್ರೀನ್ ಕೆಮಿಸ್ಟ್ರಿಗೆ ಅಭಿಮಾನಿಗಳು ಫಿದಾ ಆಗಿದ್ದರು.
ಈ ಸಿನಿಮಾಗಳ ನಂತರದಿಂದಲೇ ಇವರಿಬ್ಬರ ನಡುವೆ ಪ್ರೀತಿ ಇದೆ ಎಂಬ ಸುದ್ದಿಗಳು ಹರಿದಾಡುತ್ತಲೇ ಇದ್ದವು. ಆದರೆ, ಇಬ್ಬರೂ ಯಾವಾಗಲೂ ಈ ವಿಷಯದಲ್ಲಿ ಮೌನ ವಹಿಸಿದ್ದರು. ಈಗ ಮದುವೆ ಸುದ್ದಿ ಹೊರಬಿದ್ದಿರುವುದು, ಆ ಗಾಸಿಪ್ಗಳಿಗೆ ಹೊಸ ತಿರುವು ನೀಡಿದೆ.
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಇಬ್ಬರೂ ದಕ್ಷಿಣ ಭಾರತದಷ್ಟೇ ಅಲ್ಲ, ಬಾಲಿವುಡ್ನಲ್ಲೂ ತಮ್ಮದೇ ಆದ ಸ್ಥಾನ ಪಡೆದಿದ್ದಾರೆ. ಹೀಗಾಗಿ, ಇವರ ಮದುವೆ ಸುದ್ದಿ ದೇಶಾದ್ಯಂತ ಭಾರೀ ಕುತೂಹಲ ಮೂಡಿಸಿದೆ. ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಈಗಾಗಲೇ ಶುಭಾಶಯಗಳ ಸುರಿಮಳೆಗೈಯುತ್ತಿದ್ದಾರೆ.
















