ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಬಳಿಕ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಈ ದುರಂತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಾರು ಯಾದಗಿರಿಯಿಂದ ರಾಯಚೂರು ಕಡೆಗೆ ತೆರಳುತ್ತಿದ್ದರೆ, ಖಾಸಗಿ ಬಸ್ ಬೆಂಗಳೂರಿನಿಂದ ಕಲಬುರಗಿಗೆ ಬರುತ್ತಿತ್ತು. ಈ ವೇಳೆ ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಭಾರಿ ಬೆಂಕಿ ಕಾಣಿಸಿಕೊಂಡಿದೆ.
ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಧಾವಿಸಿದ್ದು, ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಎಂದು ವರದಿಯಾಗಿದೆ.

















