ಕಾರ್ಕಳ: ದ್ವಿತೀಯ ಪಿಯುಸಿ ಮರುಮೌಲ್ಯಮಾಪನದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ವಾಣಜ್ಯ ವಿಭಾಗದ ವಿದ್ಯಾರ್ಥಿ ಪ್ರಜ್ವಲ್ ಶೆಟ್ಟಿ ೫೯೭ ಅಂಕಗಳನ್ನು ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ನಾಲ್ಕನೇ ರ್ಯಾಂಕ್ ಹಾಗೂ ಉಡುಪಿ ಜಿಲ್ಲೆಗೆ ದ್ವಿತೀಯ ರ್ಯಾಂಕ್ ಪಡೆದುಕೊಂಡಿದ್ದಾನೆ.
ಇದಕ್ಕೂ ಮೊದಲು ರಾಜ್ಯಕ್ಕೆ ಐದನೇ ರ್ಯಾಂಕ್ ಪಡೆದಿದ್ದ ಪ್ರಜ್ವಲ್ ಶೆಟ್ಟಿ ವ್ಯವಹಾರ ಅಧ್ಯಯನ ವಿಷಯದಲ್ಲಿ ಒಂದು ಹೆಚ್ಚವರಿ ಅಂಕವನ್ನು ಪಡೆಯುವ ಮೂಲಕ ರ್ಯಾಂಕ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದ್ದಾನೆ.
ಇವನು ಇರ್ವತ್ತೂರು ನಿವಾಸಿ ರಿಕ್ಷಾ ಚಾಲಕ ಶ್ರೀ ಪ್ರಕಾಶ್ ಶೆಟ್ಟಿ ಮತ್ತು ಶ್ರೀಮತಿ ಜ್ಯೋತಿ ಶೆಟ್ಟಿ ದಂಪತಿಗಳ ಪುತ್ರ.

















