ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು ಮತ್ತು ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಘಟಕವಾರು ಮತ್ತು ವರ್ಗವಾರು ವಿವರ: 50 ಟನ್ ಐಸ್ ಪ್ಲಾಂಟ್ ಸ್ಥಾವರ ನಿರ್ಮಾಣ (ಸಾಮಾನ್ಯ -1), ಶಾಖ ನಿರೋಧಕ ವಾಹನ (ಸಾಮಾನ್ಯ -2, ಮಹಿಳೆ-5), ರೆಪ್ರಿಜರೇಟೆಡ್ ವಾಹನ (ಸಾಮಾನ್ಯ-3, ಮಹಿಳೆ-5), ಆಳ ಸಮುದ್ರ ಬೋಟ್ ನಿರ್ಮಾಣ (ಮಹಿಳೆ-1), ಉಪ್ಪು ನೀರಿನ 0.1 ಹೆ ಬಯೋಫ್ಲಾಕ್ ಘಟಕ ನಿರ್ಮಾಣ (ಮಹಿಳೆ-3). ಆಸಕ್ತರು ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ