ಪಡುಬಿದ್ರೆ -ಕಾರ್ಕಳ ರಾಜ್ಯ ಹೆದ್ದಾರಿಯ ಬದಿ ವಾಸಿಸುತ್ತಿದ್ದ ಕುಟುಂಬಗಳ ಸ್ಥಳಾಂತರ

ಉಡುಪಿ : ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಉಡುಪಿ ಜಿಲ್ಲೆ ಮತ್ತು ಪಡುಬಿದ್ರೆ ಪೊಲೀಸ್ ಠಾಣೆ ಜಂಟಿ ಕಾರ್ಯಾಚರಣೆ ನಡೆಸಿ, ಪಡುಬಿದ್ರೆ ಕಾರ್ಕಳ ರಾಜ್ಯ ಹೆದ್ದಾರಿಯ ಬದಿಯಲ್ಲಿ ವಾಸಿಸುತ್ತಿದ್ದ, ಕಮ್ಮಾರಿಕೆ ಕಸುಬು ಮಾಡಿಕೊಂಡಿದ್ದ ಮದ್ಯಪ್ರದೇಶದ ಬೋಪಾಲ್ ಮೂಲದ 3 ಕುಟುಂಬಗಳ ಒಟ್ಟು 15 ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಈ ಸ್ಥಳ ಅಪಘಾತ ಸ್ಥಳವಾಗಿರುವುದರಿಂದ ಮತ್ತು ಮಕ್ಕಳ ಸಂರಕ್ಷಣೆಯ ಹಿತದೃಷ್ಠಿಯಿಂದ ಈ ಕುಟುಂಬವನ್ನು ಅಲ್ಲಿಂದ ತೆರವುಗೊಳಿಸಲಾಯಿತು.

ಸದರಿ ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸದಾನಂದ, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಸಮಾಜ ಕಾರ್ಯಕರ್ತೆ ಗ್ಲೀಶಾ ಮೊಂತೆರೊ ಮತ್ತು ಪಡುಬಿದ್ರೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕರಾದ ಸುರೇಶ್ ಎಂ  ಇವರು ಭಾಗವಹಿಸಿದ್ದರು.