ಚಿಕಿತ್ಸೆಗೆ ಸ್ಪಂದಿಸುತ್ತಿರುವ ಪೇಜಾವರ ಶ್ರೀ

ಉಡುಪಿ: ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಶ್ರೀವಿಶ್ವೇಶ ತೀರ್ಥ ಶ್ರೀಪಾದರು ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದು, ಹಾಗಾಗಿ ಆರೋಗ್ಯವೂ ನಿಧಾನವಾಗಿ ಚೇತರಿಸಿಕೊಳ್ಳುತ್ತದೆ ಎಂದು ಶ್ರೀಗಳ ಆಪ್ತರಾದ ವಾಸುದೇವ ಭಟ್ ಪೆರಂಪಳ್ಳಿ ತಿಳಿಸಿದ್ದಾರೆ.
ಶ್ರೀಗಳ ಆರೋಗ್ಯಕ್ಕೆ ಸಂಬಂಧಿಸಿ ವದಂತಿ, ಸುಳ್ಳು ಸುದ್ದಿಗಳು ಹರಿದಾಡುತ್ತಿದೆ. ಈ ಬಗ್ಗೆ ಶ್ರೀಗಳ ಭಕ್ತರು, ಅಭಿಮಾನಿಗಳು ಆತಂಕಕ್ಕೆ ಒಳಾಗುವ ಅಗತ್ಯವಿಲ್ಲ.
ಡಾ. ಸುಧಾ ವಿದ್ಯಾಸಾಗರ ಅವರ ನೇತೃತ್ವದ ವೈದ್ಯಕೀಯ ತಂಡ ಚಿಕಿತ್ಸೆ ನೀಡುತ್ತಿದ್ದು, ವಿಶೇಷ ಕಾಳಜಿ ಹಾಗೂ ಮುತ್ತುವರ್ಜಿಯಿಂದ  ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಶ್ರೀಗಳು ಶೀಘ್ರವೇ ಗುಣಮುಖರಾಗುವುದಾಗಿ ವೈದ್ಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಕ್ತರು ಹಾಗೂ‌ ಅಭಿಮಾನಿಗಳಿಗೂ  ಅದೇ ವಿಶ್ವಾಸವಿದೆ ಎಂದಿದ್ದಾರೆ.