ಪೇಜಾವರ ಶ್ರೀ ಆರೋಗ್ಯ ವಿಚಾರಿಸಿದ ಪ್ರಧಾನಿ:ನಾಳೆ ಅಮಿತ್ ಶಾ ಉಡುಪಿ ಭೇಟಿ ಸಾಧ್ಯತೆ

ಉಡುಪಿ: ಪೇಜಾವರ ಶ್ರೀ ಆರೋಗ್ಯ ವಿಚಾರಿಸಿ  ಪ್ರಧಾನಿ ಮೋದಿ  ಶ್ರೀಗಳ ಆಪ್ತ ಕಾರ್ಯದರ್ಶಿ ಟಿ ಪಿ ಅನಂತ್ ಗೆ ದೂರವಾಣಿ ಕರೆ ಮಾಡಿದ್ದಾರೆ. ಶ್ರೀಗಳು ಶೀಘ್ರ ಗುಣಮುಖರಾಗುತ್ತಾರೆ ಎನ್ನುವ ಭರವಸೆಯನ್ನು ಆಪ್ತ ಕಾರ್ಯದರ್ಶಿ ನೀಡಿದ್ದಾರೆ.

ನಾಳೆ ಸಂಜೆ ಮುಖ್ಯ ಮಂತ್ರಿ ಬಿಎಸ್.ಯಡಿಯೂರಪ್ಪ ಹಾಗೂ ಅಮಿತ್ ಶಾ ಶ್ರೀಗಳ ಆರೋಗ್ಯ ವಿಚಾರಿಸಲು ಉಡುಪಿ‌ ಭೇಟಿ  ನೀಡುವ ಸಾಧ್ಯತೆ ಇದೆ  ಎನ್ನಲಾಗಿದೆ.