ರೈತ ಮಕ್ಕಳಿಗೆ ತೋಟಗಾರಿಕೆ ತರಬೇತಿ

ಉಡುಪಿ ಮಾ.23: ತೋಟಗಾರಿಕೆ ಇಲಾಖೆ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ, ತರಬೇತಿ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಉಡುಪಿ ಜಿಲ್ಲೆಯಿಂದ ಸಾಮಾನ್ಯ ವರ್ಗದ 6 ಹಾಗೂ ಪರಿಶಿಷ್ಟ ಜಾತಿಯ 1 ಒಟ್ಟು 7 ಅಭ್ಯರ್ಥಿಗಳ ಗುರಿ ಇದ್ದು, ಗುಂಪಿನಲ್ಲಿ 5 ಪುರುಷರಿಗೆ ಹಾಗೂ 2 ಮಹಿಳೆಯರಿಗೆ ಮೀಸಲಿರುತ್ತದೆ.

ಮಹಿಳೆಯರಿಗಾಗಿ ಮುನಿರಾಬಾದ್ ತರಬೇತಿ ಕೇಂದ್ರ ಕೊಪ್ಪಳ, ಗದಗ ತರಬೇತಿ ಕೇಂದ್ರ ಹಾಗೂ ರಂಗಸಮುದ್ರ ತರಬೇತಿ ಕೇಂದ್ರ ಮೈಸೂರು ಇಲ್ಲಿ ಪ್ರತ್ಯೇಕವಾಗಿ ತರಬೇತಿಗೆ ಅವಕಾಶ ಕಲ್ಪಿಸಲಾಗಿರುತ್ತದೆ.

ಆಸಕ್ತರು ಏಪ್ರಿಲ್ 24 ರ ಒಳಗೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಅರ್ಜಿ ಶುಲ್ಕವು ಸಾಮಾನ್ಯ ಅಭ್ಯರ್ಥಿಗಳಿಗೆ 30 ರೂ. ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರಿಗೆ 15 ರೂ. ಇದ್ದು, ಮೊತ್ತವನ್ನು IPO/ ಡಿಡಿಯನ್ನು ತೋಟಗಾರಿಕೆ ಉಪನಿರ್ದೇಶಕರು (ಜಿಲ್ಲಾ ಪಂಚಾಯತ್), ಉಡುಪಿ ಇವರ ಹೆಸರಿನಲ್ಲಿ ಪಡೆಯುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.