“ಬೀದಿಗೆ ಬಂದ್ರೆ ನೀನು, ನಿನ್ನ ಮನೆಗೆ ಬರುವೆ ನಾನು”: ಕುಂದಾಪುರ ಪೊಲೀಸರಿಂದ ಹೀಗೊಂದು ಕೊರೋನಾ ಜಾಗೃತಿ ಬರಹ

ಕುಂದಾಪುರ: ಕೋವಿಡ್-19 ಕೊರೋನಾ ಸೋಂಕು ದಿನೆದಿನೆ ಹೆಚ್ಚುತ್ತಿದ್ದು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಲವು ಕ್ರಮವನ್ನು ಕೈಗೊಂಡಿದೆ.
ಕುಂದಾಪುರ ಪೊಲೀಸ್ ಉಪವಿಭಾಗ ವ್ಯಾಪ್ತಿಯ ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಮಾವಿನಕಟ್ಟೆ ಸರ್ಕಲ್ ಬಳಿಯಲ್ಲಿ ‘ಬೀದಿಗೆ ಬಂದ್ರೆ ನೀನು…ನಿನ್ನ ಮನೆಗೆ ಬರುವೆ ನಾನು’ ಎಂಬ ಬರಹವನ್ನು ಬರೆದು ಜನರಲ್ಲಿ ಕೊರೋನಾ ಜಾಗೃತಿ ಮೂಡಿಸಲು‌ ಮುಂದಾಗಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆ ಉಪನಿರೀಕ್ಷಕ ರಾಜಕುಮಾರ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳು ಜನಜಾಗೃತಿ ಮಾಡುತ್ತಿದ್ದು ನಾಗರಿಕರು ಪೊಲೀಸರಿಗೆ ಸಹಕಾರ ನೀಡುತ್ತಿದ್ದಾರೆ.