ನೀಲಾವರ ಗೋಶಾಲೆಗೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ: ಪೇಜಾವರ ಶ್ರೀಪಾದರಿಗೆ ಗುರು ಪೂರ್ಣಿಮೆಯ ಗೌರವ ಸಮರ್ಪಣೆ

ಉಡುಪಿ: ನೀಲಾವರ ಗೋಶಾಲೆಯಲ್ಲಿ ಚಾತುರ್ಮಾಸ್ಯ ವ್ರತ ನಡೆಸುತ್ತಿರುವ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರನ್ನು ಸೋಮವಾರ ಸಂಸದೆ ಶೋಭಾ ಕರಂದ್ಲಾಜೆ ಭೇಟಿಯಾಗಿ ಗುರು ಪೂರ್ಣಿಮೆಯ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶಾಮಲಾ ಕುಂದರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಗೀತಾಂಜಲಿ ಸುವರ್ಣ ಇದ್ದರು.