ರಸ್ತೆ ಅಪಘಾತ: ಗಾಯಾಳು ಶಿರ್ವಾದ ಗೌರವ್ ಪುತ್ರನ್ ಮೃತ್ಯು

ಶಿರ್ವಾ: ಇಲ್ಲಿನ ಸೂಡಾ ದೇವಸ್ಥಾನದ ಸಮೀಪ ಆ. 22ರಂದು ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿರ್ವಾದ ಗೌರವ್ ಪುತ್ರನ್ (28) ಅವರು ಚಿಕಿತ್ಸೆ ಫಲಿಸದೆ ಇಂದು ಬೆಳಿಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅಂದು ರಾತ್ರಿ ಸ್ನೇಹಿತ ಹರೀಶ್ ಜತೆಗೆ ಗೌರವ್ ಬೈಕ್ ನಲ್ಲಿ ಹಿಂಬದಿ ಸವಾರನಾಗಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್ ಅಪಘಾತಕ್ಕೀಡಾಗಿತ್ತು. ಸೂಡಾ ದೇವಸ್ಥಾನದ ಬಳಿ ಬೈಕ್ ರಸ್ತೆಗೆ ಅಪ್ಪಳಿಸಿದ ಪರಿಣಾಮ ಗೌರವ್ ನ ತಲೆಗೆ ಗಂಭೀರ ಸ್ವರೂಪದ ಗಾಯವಾಗಿತ್ತು. ಕೂಡಲೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದೆರಡು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಗೌರವ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.