ಉಡುಪಿ: ಭಾರತವನ್ನು ಗುಲಾಮಗಿರಿಯಿಂದ ಮುಕ್ತಗೊಳಿಸಿ ಸ್ವತಂತ್ರ ಪ್ರಜಾಪ್ರಭುತ್ವ ರಾಷ್ಟ್ರವಾಗಿ ನಿರ್ಮಾಣ ಮಾಡುವುದರಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲರ ಕೊಡುಗೆ ಅಪಾರವಾಗಿದೆ. ಹಾಗೆ ಹಿಂದುಳಿದ ವರ್ಗದ ಜನತೆಗೆ ಆರ್ಥಿಕ ಸ್ವಾತಂತ್ರ್ಯವನ್ನು ಕೊಟ್ಟ ಗೌರವ ಇಂದಿರಾ ಗಾಂಧಿ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು.
ಅವರು ಇಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ದಿ. ಸರ್ದಾರ್ ವಲ್ಲಭ ಭಾಯಿ ಪಾಟೇಲ್ ಜನ್ಮದಿನಾಚರಣೆ, ದಿ. ಇಂದಿರಾ ಗಾಂಧಿ ಪುಣ್ಯಸ್ಮರಣೆ ಹಾಗೂ ಕಿಸಾನ್ ಅಧಿಕಾರ್ ದಿವಸ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ದೇಶದ ಐಕ್ಯತೆ, ಭದ್ರತೆ ಹಾಗೂ ಸಮಗ್ರತೆಗೆ ಸರ್ದಾರ್ ವಲ್ಲಭ ಭಾಯಿ ಪಟೇಲರ ಕೊಡುಗೆ ಅಪಾರ. ಹಾಗೆಯೇ 15 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಕ್ರಾಂತಿಕಾರಿಕ ಯೋಜನೆಗಳ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾದ ದಿವಂಗತ ಇಂದಿರಾ ಗಾಂಧಿಯವರ ಪುಣ್ಯತಿಥಿಯಾದ ಇಂದು ಅವರನ್ನು ದೇಶ ನೆನಪಿಸಿಕೊಳ್ಳಬೇಕಾಗಿದೆ ಎಂದರು.
ಕುಂದಾಪುರ ಕಿಸಾನ್ ಘಟಕದ ಅಧ್ಯಕ್ಷ ಭಾಸ್ಕರ್ ಶೆಟ್ಟಿ ಕುಂದಾಪುರ, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಭುಜಂಗ ಶೆಟ್ಟಿ ಮಾತನಾಡಿದರು.
ಸಮಾರಂಭದಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿ, ಮುಖಂಡರಾದ ಬಿ. ನರಸಿಂಹ ಮೂರ್ತಿ, ವೆರೋನಿಕಾ ಕರ್ನೇಲಿಯೋ, ಭಾಸ್ಕರ್ ರಾವ್ ಕಿದಿಯೂರು, ಹರೀಶ್ ಕಿಣಿ, ಶಬ್ಬೀರ್ ಅಹ್ಮದ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಹಬೀಬ್ ಆಲಿ, ರಮೇಶ್ ಕಾಂಚನ್, ರೋಶನಿ ಒಲಿವರ್, ಜ್ಯೋತಿ ಹೆಬ್ಬಾರ್, ಚಂದ್ರಿಕಾ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ಇಸ್ಮಾಯಿಲ್ ಆತ್ರಾಡಿ, ಉದ್ಯಾವರ ನಾಗೇಶ್ ಕುಮಾರ್, ವಿಶ್ವಾಸ್ ಅಮೀನ್, ಸೌರಬ್ ಬಲ್ಲಾಳ್, ಲೂಯಿಸ್ ಲೋಬೋ, ವಿಜಯ ಪೂಜಾರಿ, ಹರೀಶ್ ಶೆಟ್ಟಿ ಪಾಂಗಳ, ಶಶಿಧರ ಶೆಟ್ಟಿ ಎಲ್ಲೂರು, ಯತೀಶ್ ಕರ್ಕೇರಾ, ಉಪೇಂದ್ರ ಮೆಂಡನ್, ಕೇಶವ ಕೋಟ್ಯಾನ್, ಉಪೇಂದ್ರ ಗಾಣಿಗ, ಪ್ರಭಾಕರ ನಾಯಕ್ ಬೈಂದೂರು, ಹರೀಶ್ ಶೆಟ್ಟಿ ಕೀಳಿಂಜೆ, ನಾಗಪ್ಪ ಕೊಟ್ಟಾರಿ ವಂಡ್ಸೆ, ಜಯ ಶೆಟ್ಟಿ ಬನ್ನಂಜೆ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ವೈ ಸುಕುಮಾರ್ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಅಣ್ಯಯ್ಯ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು.












