ಮುಂಬೈ: ಟಿಆರ್ಪಿ ತಿರುಚಿದ ಪ್ರಕರಣಕ್ಕೆ ಇದೀಗ ಬಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಹೆಸರು ಮತ್ತೆ ಮುನ್ನೆಲೆಗೆ ಬಂದಿದೆ.
ಸೋಮವಾರದಂದು ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ರಿಪಬ್ಲಿಕ್ ಟಿವಿ ವಾಹಿನಿಯ ಮಾಲೀಕರು
ಬಾರ್ಕ್ ಸಂಸ್ಥೆಯ ಮಾಜಿ ಸಿಇಓ ಪಾರ್ಥೋ ದಾಸ್ಗುಪ್ತಾ ಅವರಿಗೆ ಲಕ್ಷಗಟ್ಟಲೆ ಹಣ ಪಾವತಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಅರ್ನಬ್ ಗೋಸ್ವಾಮಿ ಹೆಸರು ನೇರವಾಗಿ ಪ್ರಸ್ತಾಪವಾಗಿಲ್ಲವಾದರೂ ರಿಪಬ್ಲಿಕ್ ಟಿವಿ ವಾಹಿನಿಯ ಮಾಲೀಕರು ಅಕ್ರಮದಲ್ಲಿ ಶಾಮೀಲಾಗಿದ್ದಾರೆ ಎಂದು ಆಪಾದಿಸಲಾಗಿದೆ. ಆದರೆ, ಹೇಳಿಕೆಯ ಮುಂದುವರಿದ ಭಾಗದಲ್ಲಿ ಮುಂಬೈ ಪೊಲೀಸರು ಅರ್ನಬ್ ಗೋಸ್ವಾಮಿ ಹೆಸರನ್ನು ಉಲ್ಲೇಖಿಸಿದ್ದಾರೆ.
ಅರ್ನಬ್ ಮತ್ತು ದಾಸ್ಗುಪ್ತಾ ಇಬ್ಬರೂ ರಿಪಬ್ಲಿಕ್ ಟಿವಿಯ ಟಿಆರ್ಪಿ ಹೆಚ್ಚಳದಲ್ಲಿ ಅಕ್ರಮ ಎಸಗಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.












