ಉಡುಪಿ: ಸಾಹಿತಿ ಹಾಗೂ ಉಪನ್ಯಾಸಕಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ಕವನ ಸಂಕಲನ ‘ಅವನು ಹೆಣ್ಣಾಗಬೇಕು’ ಕೃತಿ ಬಿಡುಗಡೆ ಸಮಾರಂಭ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಭವನದಲ್ಲಿ ಶನಿವಾರ ನಡೆಯಿತು.
ಕನ್ನಡದ ಹಿರಿಯ ಸಾಹಿತಿ ನಾಟಕಗಾರ ಎಸ್.ಎನ್. ಸೇತುರಾಂ ಕೃತಿ ಬಿಡುಗಡೆಗೊಳಿಸಿದರು. ಚಲನಚಿತ್ರ ಹಾಗೂ ನಾಟಕ ನಿರ್ದೇಶಕ ಕಾಸರಗೋಡು ಚಿನ್ನಾ, ಸಾಹಿತಿ ಸುಧಾ ಆಡುಕಳ, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ನಾಯ್ಕ್, ಎಂ.ಯು.ಪಿ ಪ್ರಧಾನ ಸಂಪಾದಕಿ ಪ್ರೊ. ನೀತಾ ಇನಾಂದಾರ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ್ ಶೆಣೈ, ಅಧ್ಯಕ್ಷ ಪ್ರೊ. ಶಂಕರ್ ಉಪಸ್ಥಿತರಿದ್ದರು.












