ಮಂಗಳೂರು: ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಫೆ. 17ರಿಂದ 21ರ ವರೆಗೆ ನಡೆದ ಸೀನಿಯರ್ ನ್ಯಾಷನಲ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್-2021ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ಮಂಗಳೂರಿನ ಪ್ರದೀಪ್ ಕುಮಾರ್ ಆಚಾರ್ಯ ಅವರು 83 ಕೆಜಿ ದೇಹತೂಕ ವಿಭಾಗದಲ್ಲಿ ಒಂದು ಚಿನ್ನ, ಒಂದು ಬೆಳ್ಳಿ ಹಾಗೂ ಒಂದು ಕಂಚಿನ ಪದಕವನ್ನು ಗಳಿಸಿದ್ದಾರೆ.
ಇವರು ಸ್ಕ್ವಾಟ್ ವಿಭಾಗದಲ್ಲಿ 312.5 ಕೆ.ಜಿ., ಬೆಂಚ್ ಪ್ರೆಸ್ ವಿಭಾಗದಲ್ಲಿ 220 ಕೆ.ಜಿ., ಡೆಡ್ ಲಿಫ್ಟ್ ವಿಭಾಗದಲ್ಲಿ 275 ಕೆ.ಜಿ. ಸೇರಿ ಒಟ್ಟು 807 ಕೆ.ಜಿ. ಭಾರ ಎತ್ತುವ ಮೂಲಕ ಮೂರು ಪದಕಗಳನ್ನು ಪಡೆದುಕೊಂಡಿದ್ದಾರೆ. ಪ್ರದೀಪ್ ಕುಮಾರ್ ಮಂಗಳೂರಿನ ಪ್ರತಿಷ್ಠಿತ ಬಾಲಾಂನೇಯ ಜಿಮ್ನೇಶಿಯಂನಲ್ಲಿ ಸತೀಶ್ ಕುಮಾರ್ ಕುದ್ರೋಳಿ ಅವರ ಬಳಿ ತರಬೇತಿ ಪಡೆಯುತ್ತಿದ್ದಾರೆ.












