ಬೆಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಓವರ್ ಸ್ಪೀಡ್ ನಿಂದ ಆಗುತ್ತಿರುವ ಅನಾಹುತಗಳನ್ನು ತಪ್ಪಿಸಲು ಕೇಂದ್ರ ಸಾರಿಗೆ ಇಲಾಖೆ ಮುಂದಾಗಿದೆ.
ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೂಕ್ತ ಕ್ಯಾಮರಾಗಳ ಅಳವಡಿಕೆ ಮಾಡಿ ವಾಹನಗಳ ಮೇಲೆ ನಿಗಾ ವಹಿಸಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಲ್ಲಾ ಹೆದ್ದಾರಿಗಳಲ್ಲೂ ಸಾರಿಗೆ ಇಲಾಖೆ ಕ್ಯಾಮರಾ ಅಳವಡಿಕೆ ಅಗತ್ಯ ತಯಾರಿ ನಡೆಸಿಕೊಂಡಿದೆ. ಆ ಮೂಲಕ ಕೇಂದ್ರ ಸಾರಿಗೆ ಇಲಾಖೆ ಕಠಿಣ ರೂಲ್ಸ್ ಜಾರಿ ಮಾಡಲಿದ್ದು, ವಾಹನ ಸವಾರರು ಚೂರು ಎಡವಿದರೂ ಭಾರೀ ಪ್ರಮಾಣದಲ್ಲಿ ದಂಡ ತೆರಲೇಬೇಕಾಗುತ್ತದೆ.
ಹೌದು, ವಾಹನ ಸವಾರರು ಇನ್ಮುಂದೆ ಎಚ್ಚರಿಕೆಯಿಂದ ಇರಲೇಬೇಕು. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸ್ಪೀಡ್ ಆಗಿ ವಾಹನ ಓಡಿಸುವ ಮುನ್ನ ಎರಡು ಬಾರಿ ಯೋಚಿಸಬೇಕು. ಯಾವುದೇ ಕಾರಣಕ್ಕೂ ನಮ್ಮನ್ನು ಯಾರು ತಡೆಯೋದಿಲ್ಲ, ನೋಡೋದಿಲ್ಲ ಎಂದು ಬೇಕಾಬಿಟ್ಟಿ ವಾಹನ ಚಲಾಯಿಸೋಕೆ ಆಗುವುದಿಲ್ಲ. ಯಾರಾದರೂ ಒಂದು ವೇಳೆ ನಿಯಮ ಉಲ್ಲಂಘಿಸಿ ಸ್ಪೀಡ್ ಆಗಿ ವಾಹನ ಚಲಾಯಿಸಿದರೆ ಮುಂದಿನ ಟೋಲ್ನಲ್ಲೇ ಫೈನ್ ಕಟ್ಟಬೇಕಾಗುತ್ತದೆ. ನಿಮ್ಮ ಗಾಡಿ ಸಂಖ್ಯೆ ಮತ್ತು ಸ್ಪೀಡ್ ಬಗ್ಗೆ ಇಲಾಖೆಗೆ ಕೂಡಲೇ ಮಾಹಿತಿ ರವಾನೆಯಾಗುತ್ತದೆ.












