ಆ. 23ಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್‌ ಅಜೆಕಾರು ಶಾಖೆಯ ಸ್ಥಳಾಂತರ ಸಮಾರಂಭ

ಕಾರ್ಕಳ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ (ಎಸ್ ಸಿಡಿಸಿಸಿ) ಅಜೆಕಾರು ಶಾಖೆಯು ಅಜೆಕಾರು ಮುಖ್ಯ ರಸ್ತೆಯಲ್ಲಿರುವ ಗಣೇಶ್‌ ಟ್ರೇಡ್‌ ಸೆಂಟರ್‌ನ ನೆಲ ಮಹಡಿಗೆ ಸ್ಥಳಾಂತರಗೊಳ್ಳಲಿದ್ದು, ಇದರ ಉದ್ಘಾಟನಾ ಸಮಾರಂಭ ಇದೇ ಆ.23ರಂದು 10.30ಕ್ಕೆ ನಡೆಯಲಿದೆ.

ನೂತನ ಸ್ಥಳಾಂತರ ಶಾಖೆಯನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಉದ್ಘಾಟಿಸುವರು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಡಾ. ಎಂ.ಎನ್.‌ ರಾಜೇಂದ್ರ ಕುಮಾರ್‌ ಅ‍ಧ್ಯಕ್ಷತೆ ವಹಿಸಲಿದ್ದಾರೆ. ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ. ಭವಾನಿ ಶಂಕರ್‌, ಕಟ್ಟಡ ಮಾಲೀಕ ಸುಜಯ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.