ಉಡುಪಿ: ಶ್ರೀರಾಮಸೇನೆಯ ರಾಜ್ಯ ನಾಯಕನ ಕಾರ್ಯವೈಖರಿ ಬಗ್ಗೆ ಬೇಸತ್ತು ಸಂಘಟನೆಗೆ ಜಯರಾಂ ಅಂಬೆಕಲ್ಲು ರಾಜೀನಾಮೆ ನೀಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಶ್ರೀರಾಮಸೇನೆಯ ಸ್ಥಾಪಕ ನಗರ ಉಪಾಧ್ಯಕ್ಷಾಗಿದ್ದ ಜಯರಾಂರವರು ತದ ನಂತರ ವಿವಿಧ ಜವಾಬ್ದಾರಿ ನಿರ್ವಹಿಸಿ, ಜಿಲ್ಲಾಧ್ಯಕ್ಷರಾಗಿ ಎಲ್ಲಾ ಜನರನ್ನು ಸಮಾನವಾಗಿ ಕೊಂಡೊಯ್ದು ಸಂಘಟನೆಯನ್ನು ರಾಜ್ಯ ಮಟ್ಟದಲ್ಲೇ ಗುರುತಿಸಲು ಕಾರಣೀಭೂತರಾದವರು.
ಈಗ ರಾಜ್ಯ ಪ್ರಧಾನ ಕಾರ್ಯದರ್ಶಿಯವರ ಬೇಜವ್ದಾರಿತನದಿಂದ ಶ್ರೀ ರಾಮಸೇನೆಗೆ ರಾಜೀನಾಮೆಯನ್ನು ನೀಡಿದ್ದಾರೆ ಎಂಬುದು ವಿಪರ್ಯಾಸ. ಹಿಂದುತ್ವ ಮತ್ತು ಸಿದ್ದಾಂತ ದಲ್ಲಿ ರಾಜಿ ಮಾಡಿಕೊಳ್ಳದ ಜಯರಾಂ ಅಂಬೆಕಲ್ಲು ರವರು ತಮ್ಮ ಮುಂದಿನ ನಡೆಯನ್ನು ಕಾರ್ಯಕರ್ತರೊಂದಿಗೆ ಚರ್ಚಿಸಿ ಶೀಘ್ರದಲ್ಲೆ ಬಹಿರಂಗ ಪಡಿಸಲಿದ್ದೇನೆ ಎಂದು ತಿಳಿದುಬಂದಿದೆ.















