ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಅಕ್ಷತಾ ಪೂಜಾರಿಗೆ ಹುಟ್ಟೂರಿನಲ್ಲಿ ಭವ್ಯ ಸ್ವಾಗತ: ಪೂರ್ಣಿಮಾ ಸಿಲ್ಕ್ ವತಿಯಿಂದ ಸನ್ಮಾನ

ಕಾರ್ಕಳ: ತೆಲಂಗಾಣದ ವಾರಂಗಲ್‌ನಲ್ಲಿ ನಡೆದ ರಾಷ್ಟ್ರೀಯ ಮುಕ್ತ ಚಾಂಪಿಯನ್‌ಶಿಪ್‌ನ ಹೆಪ್ಟಾಥ್ಲಾನ್‌ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕಾರ್ಕಳ ತಾಲೂಕು ಕೆರ್ವಾಶೆ ಗ್ರಾಮದ ಅಕ್ಷತಾ ಪೂಜಾರಿ ಅವರನ್ನು ಭವ್ಯ ಸ್ವಾಗತದೊಂದಿಗೆ ಕಾರ್ಕಳಕ್ಕೆ ಬರಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಜೋಡುರಸ್ತೆ ಪೂರ್ಣಿಮಾ ಸಿಲ್ಕ್ ಸಂಸ್ಥೆಯ ಪಾಲುದಾರ ರವಿಪ್ರಕಾಶ್ ಪ್ರಭು ಮತ್ತು ಕಿರಣಾ ರವಿ ಪ್ರಕಾಶ್ ಅವರು ಅಕ್ಷತಾ ಅವರನ್ನು ಸನ್ಮಾನಿಸಿದರು. ಬಿಜೆಪಿ ರಾಜ್ಯ ವಕ್ತಾರ ಗಣೇಶ್‌ ಕಾರ್ಣಿಕ್‌, ಯುವರಾಜ್‌ ಶೆಟ್ಟಿ, ಯೋಗೀಶ್‌ ಸಾಲ್ಯಾನ್‌, ಭರತ್‌ ಶೆಟ್ಟಿ, ರವಿಕುಮಾರ್‌ ಶೆಟ್ಟಿ, ಚಿರಂಜೀವಿ ವಿಜಯ್‌, ಅಕ್ಷತಾ ಪೂಜಾರಿಯ ತಂದೆ-ತಾಯಿ ಉಪಸ್ಥಿತರಿದ್ದರು.