ಉದ್ಯಮಿ, ಬಿಜೆಪಿ ಹಿರಿಯ ನಾಯಕ ಸುಧೀರ್ ಘಾಟೆ ನಿಧನ

ಮಂಗಳೂರು: ಉದ್ಯಮಿ, ಬಿಜೆಪಿ ಹಿರಿಯ ನಾಯಕ ಸುಧೀರ್ ಘಾಟೆ ಅವರು (64) ಶುಕ್ರವಾರ ನಿಧನ ಹೊಂದಿದರು.

ಆರ್ ಎಸ್ಎಸ್ ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ತನ್ನ ವೃತ್ತಿ ಜೀವನವನ್ನು ಆರಂಭಿಸಿದ್ದ ಸುಧೀರ್ ಘಾಟೆ 1995ರಲ್ಲಿ ರಾಜ್ಯ ಬಿಜೆಪಿಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಕಟ್ಟಿದ್ದರು.

1992ರಲ್ಲಿ ಜಾಹೀರಾತು ಸಂಸ್ಥೆ,’ ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್’ ಕಟ್ಟಿ ಬೆಳೆಸಿದ್ದ ಸುಧೀರ್ ಘಾಟೆ ಮಂಗಳೂರಿನ ಪ್ರಸಿದ್ಧ ಉದ್ಯಮಿಯಾಗಿದ್ದರು.
ಬಿಎಂಎಸ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದ ದಿವಂಗತ ಪ್ರಭಾಕರ್ ಘಾಟೆ- ಶಾರದಾ ಘಾಟೆ ದಂಪತಿ ಪುತ್ರರಾದ ಸುಧೀರ್ ಪಿಆರ್ ಐಎಸ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.