ಮಣಿಪಾಲ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಬೀದಿನಾಟಕದ ಮೂಲಕ ಆರೋಗ್ಯ ಜಾಗೃತಿ

ಉಡುಪಿ ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಇವರ ಸಹಯೋಗದಲ್ಲಿ ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಮುಂದಾಳತ್ವದಲ್ಲಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳ ಕಲಾ ತಂಡದಿಂದ ‘ತಾಯಿ ಮತ್ತು ಮಕ್ಕಳ ಆರೋಗ್ಯ, ಕ್ಷಯರೋಗ ಮತ್ತು ಕೊರೊನಾ ಮಹಾಮಾರಿ’ ಕುರಿತು ಮಾಹಿತಿ ನೀಡುವ ಜಾನಪದ ಕಲಾ ಪ್ರದರ್ಶನ ಹಾಗೂ ಬೀದಿನಾಟಕದ ಮೂಲಕ ಆರೋಗ್ಯ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮಣಿಪಾಲದ ಟೈಗರ್ ಸರ್ಕಲ್ ನಲ್ಲಿ ಸೋಮವಾರ ಆಯೋಜಿಸಲಾಯಿತು.

ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ಡಾ. ಗೌರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ತಾಲ್ಲೂಕು ಶಿಕ್ಷಣಾಧಿಕಾರಿ ಚಂದ್ರಕಲಾ, ರೋಟರಿ ಮಣಿಪಾಲ್ ಅಧ್ಯಕ್ಷ ಡಾ.ವಿರೂಪಾಕ್ಷ ದೇವರಮನೆ, ರೊಟೇರಿಯನ್ ಶ್ರೀಪತಿ, ಯುಪಿಎಂಸಿ ಕಾಲೇಜಿನ ವಾಣಿಜ್ಯ ಉಪನ್ಯಾಸಕ ರಾಘವೇಂದ್ರ ಜಿ.ಜಿ, ಅರ್ಥಶಾಸ್ತ್ರ ಉಪನ್ಯಾಸಕ ಚಂದ್ರಶೇಖರ್, ಬೀದಿ ನಾಟಕದ ನಿರ್ದೇಶಕ ರಾಮಾಂಜಿ ನಮ್ಮಭೂಮಿ, ಸಂಚಾಲಕ ಶಿಲ್ಪ ಶೆಟ್ಟಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಚಿಣ್ಣಪ್ಪ, ಹರ್ಷಿತ್ ವಿ ಶೆಟ್ಟಿ, ಹಿಮಲ್ ಕುಮಾರ್, ಪ್ರಾಕ್ಷ, ದೀಕ್ಷಾ ಆಚಾರ್ಯ, ಯಶ್ವಿತಾ, ಸಂಗೀತಾ, ನಿಧಿ, ಶ್ರಾವ್ಯಾ, ಮನ್ವಿತ್, ನಿಖಿಲ್, ವಿವೇಕಾನಂದ್ ಎನ್ ಅವರು ಬೀದಿನಾಟಕದ ಮೂಲಕ ಆರೋಗ್ಯದ ಜಾಗೃತಿ ಮೂಡಿಸಿದರು. ಇದೇ ತಂಡದಿಂದ ಜಿಲ್ಲೆಯಾದ್ಯಂತ 20 ಪ್ರದರ್ಶನಗಳು ನಡೆಯಲಿದೆ. ಪ್ರತಿಷ್ಠಾನದ ಸಂಚಾಲಕ ರವಿರಾಜ್ ಹೆಚ್.ಪಿ ಸ್ವಾಗತಿಸಿ ನಿರೂಪಿಸಿದರು, ಕಲಾವಿದೆ ಶಿಲ್ಪ ಜೋಶಿ ವಂದಿಸಿದರು.