ಉಡುಪಿ: ಬನ್ನಂಜೆ ನಿವಾಸಿ ನಾಪತ್ತೆ 

ಉಡುಪಿ: ಮನೆಯಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದ ನಗರದ ಬನ್ನಂಜೆ ಹೀರಾಭಾಗ ನಿವಾಸಿ ಸುರೇಶ್ ಆಚಾರ್ಯ (52) ಎಂಬ ವ್ಯಕ್ತಿಯು ಜನವರಿ 19 ರಂದು ಸಂಜೆ 4 ಗಂಟೆಯ ಸುಮಾರಿಗೆ ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 7 ಇಂಚು ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.