ನಾವುಂದ: ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆಗೆ ಯತ್ನ

ಬೈಂದೂರು: ಕಲ್ಲು ಎತ್ತು ಹಾಕಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ಬೈಂದೂರು ತಾಲೂಕಿನ ನಾವುಂದದ ವಿನಾಯಕ ಬಸ್ ನಿಲ್ದಾಣದ ಬಳಿ ನಡೆದಿದೆ.

ನಾವುಂದ ಗ್ರಾಮದ ನೀಲು ಎಂಬವರು ಜ. 26ರಂದು ಸಂಜೆ ನಾವುಂದದಿಂದ ಕುಂದಾಪುರ ಆಸ್ಪತ್ರೆಗೆ ಹೋಗುತ್ತಿದ್ದರು. ವಿನಾಯಕ ಬಸ್ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿರುವ ವೇಳೆ ಆರೋಪಿ ತಿಮ್ಮಪ್ಪ  ಪೂಜಾರಿ ಎಂಬಾತನು ನೀಲು ಅವರನ್ನು ತಡೆದು ಮುಂದಕ್ಕೆ ಹೋಗಲು ಬಿಡದೇ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಶಿಲೆ ಕಲ್ಲನ್ನು ಎತ್ತಿ ಬಿಸಾಡಿ ಪಿರ್ಯಾದಿದಾರರನ್ನು ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ನೀಲು ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.