ಉಡುಪಿ: ಇಂದು ಇತಿಹಾಸ ಪ್ರಸಿದ್ಧ ಶ್ರೀ ಜಯದುರ್ಗಾ ಪರಮೇಶ್ವರಿ ದೇವಸ್ಥಾನದ ಹೊರಕಾಣಿಕೆ ಸಮರ್ಪಣಾ ಕಾರ್ಯಕ್ರಮ

ಉಡುಪಿ: ಇತಿಹಾಸ ಪ್ರಸಿದ್ಧ ಕನ್ನರ್ಪಾಡಿ ಶ್ರೀ ಜಯದುರ್ಗಾ ಪರಮೇಶ್ವರಿ ದೇವಸ್ಥಾನದ ಅಷ್ಟಬಂಧ ಬ್ರಹ್ಮ ಕುಂಭಾಭಿಷೇಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಪ್ರಯುಕ್ತ ಇಂದು (ಮಾ.31) ನಗರದ ಜೋಡುಕಟ್ಟೆಯಿಂದ ಹೊರಕಾಣಿಕೆ ಸಮರ್ಪಣಾ ಮೆರವಣಿಗೆ ಹೊರಡಲಿದೆ.

ಈ ಹೊರಕಾಣಿಕೆ ಕಾರ್ಯಕ್ರಮಕ್ಕೆ ಅಕ್ಕಿ ಬೆಲ್ಲ ದಾನ್ಯ ಫಲವಸ್ತು ತರಕಾರಿಗಳನ್ನು ಹಾಗೂ ಇನ್ನಿತರ ವಸ್ತುಗಳನ್ನು ಊರ ಪರವೂರ ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ತರಬೇಕಾಗಿ ಭಕ್ತಿಪೂರ್ವಕವಾಗಿ ವಿನಂತಿಸುತ್ತೇವೆ. ಭಕ್ತಾಧಿಗಳು ಶ್ರೀಕ್ಷೇತ್ರದ ಕಚೇರಿಯಲ್ಲಿ ಹೊರಕಾಣಿಕೆ ಒಪ್ಪಿಸಬಹುದು.

ಈ ಹೊರಕಾಣಿಕೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡಿಕೊಡಬೇಕಾಗಿ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.