ಏ.3, 4: ಕೃಷಿ ಇಲಾಖೆ ಸಚಿವರ ಪ್ರವಾಸ

ಉಡುಪಿ: ರಾಜ್ಯದ ಕೃಷಿ ಇಲಾಖೆ ಸಚಿವ ಬಿ.ಸಿ ಪಾಟೀಲ್ ಅವರು ಏಪ್ರಿಲ್ 3 ಮತ್ತು 4 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಏ.3 ರಂದು ಸಂಜೆ 5.30 ಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಬೈಂದೂರಿನಲ್ಲಿ ವಾಸ್ತವ್ಯ ಮಾಡಲಿರುವರು.

ಏ. 4 ರಂದು ಬೆಳಗ್ಗೆ 10.30 ಕ್ಕೆ ಬೈಂದೂರು ತಾಲೂಕು ಉಪ್ಪುಂದ ಗ್ರಾಮದಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ನಿ. ದ ನೂತನ ಉಪ್ಪುಂದ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ನಂತರ ಹಿರೇಕೆರೂರಿಗೆ ತೆರಳಲಿರುವರು.