ಉಡುಪಿ: ಶ್ರೀಲಕ್ಷ್ಮೀವೆಂಕಟೇಶ ದೇವಸ್ಥಾನದಲ್ಲಿ 122ನೇ ಭಜನಾ ಸಪ್ತಾಹ ಅಂಗವಾಗಿ ಭಾನುವಾರದಂದು ರಂಗಪೂಜೆಯ ಪ್ರಯುಕ್ತ ವಿಶೇಷ ಹೂವಿನ ಅಲಂಕಾರ ನಡೆಯಿತು. ಹೂವಿನ ಅಲಂಕಾರದಲ್ಲಿಯೂ ಭಾರತದ ತ್ರಿವರ್ಣ ಧ್ವಜವನ್ನು ಎತ್ತಿ ತೋರಿಸಿದ್ದು ವಿಶೇಷವಾಗಿತ್ತು.