ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ಹಾಗೂ ಬಿ.ಜೆ.ಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೂಚನೆಯಂತೆ ‘ಮನೆ ಮನೆಗಗಳಲ್ಲಿ ತ್ರಿವರ್ಣ ಧ್ವಜ’ ಅಭಿಯಾನದ ಪ್ರಯುಕ್ತ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಜಿಲ್ಲೆಯ ಪ್ರಮುಖರನ್ನು ಭೇಟಿಯಾಗಿ ರಾಷ್ಟ್ರಧ್ವಜವನ್ನು ಹಸ್ತಾಂತರಿಸಲಾಯಿತು.
ಮಣಿಪಾಲ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಹೆಚ್.ಎಸ್. ಬಲ್ಲಳ್, ಉಡುಪಿ ಜಿಲ್ಲಾ ಸಂಘ ಚಾಲಕ್ ನಾರಾಯಣ ಶೆಣೈ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ವೈದೇಹಿ ಕಾವ್ಯನಾಮದ ಖ್ಯಾತ ಸಾಹಿತಿ ಜಾನಕಿ ಶ್ರೀನಿವಾಸ್ ಮೂರ್ತಿ, ಉಡುಪಿ ಜಿಲ್ಲಾ ಬಿಲ್ಡರ್ಸ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಮಾಂಡವಿ ಬಿಲ್ಡರ್ಸ್ ಎಂಡ್ ಡೆವಲಪರ್ಸ್ ಆಡಳಿತ ನಿರ್ದೇಶಕ ಜೆರ್ರಿ ವಿನೆಂಟ್ ಡಯಾಸ್, ಹರ್ಷ ಸಮೂಹ ಸಂಸ್ಥೆ ಹಾಗೂ ಪ್ರಕಾಶ್ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಸೂರ್ಯಪ್ರಕಾಸ್, ಉಡುಪಿ ಜಿಲ್ಲಾ ಬಳಕೆದಾರರ ವೇದಿಕೆಯ ಅಧ್ಯಕ್ಷ ಡಾ ರವೀಂದ್ರನಾಥ್ ಶ್ಯಾನುಭಾಗ್ ಮುಂತಾದ ಗಣ್ಯರಿಗೆ ಧ್ವಜವನ್ನು ವಿತರಿಸಲಾಯಿತು.
ಆಗಸ್ಟ್ 13 ರ ಮುಂಜಾನೆಯಿಂದ ಆಗಸ್ಟ್ 15 ರ ಸಂಜೆಯ ತನಕ ಪ್ರತೀ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವ ಜತೆಗೆ ಎಲ್ಲಾ ಕಚೇರಿಗಳು, ಸಂಘ ಸಂಸ್ಥೆಗಳು ಎಲ್ಲಾ ಧರ್ಮ ಸಮುದಾಯಗಳ ಮಠ ಮಂದಿರ ದೇವಸ್ಥಾನಗಳು ಹಾಗೂ ಅಂಗಡಿ ಮುಂಗಟ್ಟುಗಳ ಮೇಲೆ ತ್ರಿವರ್ಣ ಧ್ವಜವನ್ನು ಅರಳಿಸಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಸಂಭ್ರಮಿಸುವಂತೆ ಕರೆ ನೀಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್, ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಂ ಅಂಚನ್, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ನಗರ ಸಭಾ ಸದಸ್ಯ ಸಂತೋಷ್ ಜತ್ತನ್ ಉಪಸ್ಥಿತರಿದ್ದರು.












