ಮಂಗಳೂರು: ತುಳು ಬಾಷೆಗೆ ಮಾನ್ಯತೆ ಸಿಗಬೇಕು ಮತ್ತು ತುಳು ಭಾಷೆಯನ್ನು 8 ನೇ ಪರಿಚ್ಚೇದಕ್ಕೆ ಸೇರಿಸಬೇಕು ಎಂಬ ತುಳುವರ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಪೋಸ್ಟ್ ಕಾರ್ಡ್ ಮೂಲಕ ತಿಳಿಸುವ ವಿಭಿನ್ನ ಯೋಜನೆಯನ್ನು ತುಳುವೆರ್ ಕುಡ್ಲ ತುಳು ಸಂಘಟನೆ, ತುಳುನಾಡು ವಾರ್ತೆ ವಾರ ಪತ್ರಿಕೆ ಮತ್ತು ನಮ್ಮ ಟಿ.ವಿ ಸಹಯೋಗದಲ್ಲಿ ಸೆಪ್ಟೆಂಬರ್ 1 ಗುರುವಾರದಂದು ತುಳುನಾಡಿನ ತುತ್ತ ತುದಿಯಾದ ಬೆಳ್ತಂಗಡಿ ತಾಲೂಕಿನ ಬಂಜಾರು ಮಲೆ ಎಂಬ ಪ್ರದೇಶದಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ.
ಈ ಅಭಿಯಾನವು 1 ಲಕ್ಷಕ್ಕೂ ಅಧಿಕ ಪೋಸ್ಟ್ ಕಾರ್ಡ್ ತುಳುನಾಡಿನ ಜನತೆಯಿಂದ ಬರೆಸಿ ಕಳುಹಿಸುವ ಗುರಿಯನ್ನು ಹೊಂದಿದ್ದು, ಈಗಾಗಲೇ ಅಭಿಯಾನಕ್ಕೆ ಹಲವು ಸಂಘಟನೆಗಳ ಬೆಂಬಲ ದೊರೆತಿದೆ. ತುಳುನಾಡಿನ ಎಲ್ಲಾ ರಾಜಕೀಯ, ಧಾರ್ಮಿಕ ಮತ್ತು ಎಲ್ಲಾ ಸಂಘಟನೆಗಳಿಗೆ ಈ ಅಭಿಯಾನದಲ್ಲಿ ನಮ್ಮೊಂದಿಗೆ ಕೈ ಜೋಡಿಸುವಂತೆ ಆಯೋಜಕರು ವಿನಂತಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9845858594 ಮೊಬೈಲ್ ನಂಬರನ್ನು ಸಂಪರ್ಕಿಸಲು ಕೋರಲಾಗಿದೆ.












