ಸುಳ್ಯ: ಸ್ಕೂಟರ್-ಕಾರ್ ಡಿಕ್ಕಿ; ಅಣ್ಣ- ತಂಗಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹೆದ್ದಾರಿಯಲ್ಲಿ ಕಾರೊಂದಕ್ಕೆ ಸ್ಕೂಟರ್ ಡಿಕ್ಕಿ ಹೊಡೆದು ಯುವಕ ಮತ್ತು ಆತನ ಸಹೋದರಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಸುಬ್ರಹ್ಮಣ್ಯ-ಜಾಲ್ಸೂರು ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಮಧ್ಯಾಹ್ನ ಸುಳ್ಯ ತಾಲೂಕಿನ ಎಲಿಮಲೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಕಡಪಳ ಬಾಜಿನಡ್ಕದ ನಿಶಾಂತ್ ಹಾಗೂ ಅವರ ತಂಗಿ ಮೋಕ್ಷ ಎಂದು ಗುರುತಿಸಲಾಗಿದೆ. ನಿಶಾಂತ್ ಸುಳ್ಯದ ಜೂನಿಯರ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಆತನ ಸಹೋದರಿ 5 ನೇ ತರಗತಿಯಲ್ಲಿ ಓದುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ನಿಶಾಂತ್ ಮೃತಪಟ್ಟರೆ, ವಿಶೇಷ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುತ್ತಿದ್ದಾಗ ಮೋಕ್ಷ ಮೃತಪಟ್ಟಿದ್ದಾರೆ.