ಕಾಡುಬೆಟ್ಟು ಶನೇಶ್ವರ ದೇವಸ್ಥಾನದಲ್ಲಿ ಚಂದ್ರಗ್ರಹಣ ಶಾಂತಿ ಹೋಮ

ಉಡುಪಿ: ಅಬ್ಬಗ ದಾರಗ ವೀರಭದ್ರ ಮತ್ತು ಶನೇಶ್ವರ ದೇವಸ್ಥಾನ ಟ್ರಸ್ಟ್ ಕಾಡುಬೆಟ್ಟು ವತಿಯಿಂದ ಶನೇಶ್ವರ ದೇವಸ್ಥಾನದಲ್ಲಿ ಚಂದ್ರ ಗ್ರಹಣ ಪ್ರಯುಕ್ತ ಮಂಗಳವಾರದಂದು ಲೋಕಕಲ್ಯಾಣಾರ್ಥವಾಗಿ ಸಂಜೆ ಸಾಮೂಹಿಕ ಚಂದ್ರಗ್ರಹಣ ಶಾಂತಿ ಹೋಮ ನಡೆಯಿತು.

ದೇವಳದ ಅರ್ಚಕರು , ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.