ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ: ಶಾಸಕರಿಂದ ಪೂರ್ವತಯಾರಿ ನಿರೀಕ್ಷಣೆ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನವು ಫೆಬ್ರವರಿ 11 ಮತ್ತು 12 ರಂದು ಉಡುಪಿಯ ಎಂ.ಜಿ.ಎಂ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ಈ ಹಿನ್ನೆಲೆ ಶಾಸಕ ಕೆ. ರಘುಪತಿ ಭಟ್ ಮಂಗಳವಾರ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಪೂರ್ವ ತಯಾರಿಯ ಕುರಿತು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ ಕಾರ್ಯಾಧ್ಯಕ್ಷ ಡಾ. ಜಿ.ಎಲ್. ಹೆಗಡೆ, ಪ್ರಧಾನ ಸಂಚಾಲಕ ಪಿ.ಕಿಶನ್ ಹೆಗ್ಡೆ, ಸಂಚಾಲಕ ಮುರಳಿ ಕಡೆಕಾರ್, ಸದಸ್ಯರಾದ ನಾರಾಯಣ್ ಎಂ. ಹೆಗ್ಡೆ, ಮಹಾವೀರ ಪಾಂಡಿ ಹಾಗೂ ಭುವನ ಪ್ರಸಾದ್ ಹೆಗ್ಡೆ, ಆಹಾರ ಸಮಿತಿಯ ಮುಖ್ಯಸ್ಥ ಮಂಜುನಾಥ್ ಹೆಬ್ಬಾರ್ ಉಪಸ್ಥಿತರಿದ್ದರು.