ಮಂಗಳೂರು: ಕುಲದೀಪ್ ಕುಮಾರ್ ಆರ್ ಜೈನ್ ನೂತನ ಪೊಲೀಸ್ ಕಮಿಷನರ್

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಶಶಿ ಕುಮಾರ್ ಬದಲಿಗೆ ಕುಲದೀಪ್ ಕುಮಾರ್ ಆರ್ ಜೈನ್ ಐಪಿಎಸ್ (ಕೆಎನ್-2011) ನೂತನ ಕಮಿಷನರ್ ಆಗಿ ನೇಮಕಗೊಳ್ಳಲಿದ್ದಾರೆ. ಕುಲದೀಪ್ ಕುಮಾರ್ ಆರ್ ಜೈನ್ ಪ್ರಸ್ತುತ ಬೆಂಗಳೂರು ನಗರ ಸಂಚಾರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್ ಅವರನ್ನು ವರ್ಗಾವಣೆ ಮಾಡಿ ಫೆ.23ರಂದು ಅಧಿಕೃತ ಆದೇಶ ಹೊರಡಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ರೈಲ್ವೇ ಉಪ ಪೊಲೀಸ್ ಮಹಾನಿರೀಕ್ಷಕರಾಗಿ ವರ್ಗಾಯಿಸಲಾಗಿದೆ.