ಕರ್ನಾಟಕ ವಿಧಾನಸಭೆ ಚುನಾವಣೆ: ಇಂದೇ ಮುಹೂರ್ತ ಫಿಕ್ಸ್

ನವದೆಹಲಿ: ಇಂದು (ಬುಧವಾರ) ಕೇಂದ್ರ ಚುನಾವಣಾ ಆಯೋಗ ದಿಂದ ಸುದ್ದಿಗೋಷ್ಠಿ ನಡೆಯಲಿದ್ದು, ಚುನಾವಣಾ ದಿನಾಂಕ ಘೋಷಣೆ ಮಾಡಲಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಲಿದೆ.
ಮೇ ಮೊದಲ ವಾರದಲ್ಲಿ ರಾಜ್ಯದ 224 ಕ್ಷೇತ್ರಗಳಿಗೆ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು,ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದರೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.