ಕ್ರಿಯೇಟಿವ್‌ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್‌ ಅಂಬೇಡ್ಕರ್‌ ಜಯಂತಿ ಆಚರಣೆ

ಕಾರ್ಕಳ: ಸಂವಿಧಾನ ಶಿಲ್ಪಿ ಡಾ. ಬಿ ಆರ್‌ ಅಂಬೇಡ್ಕರ್‌ ರವರ 132 ನೇ ಜಯಂತಿಯನ್ನು ಇಂದು ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು.

ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಇವರು ಪುಷ್ಪ ನಮನ ಸಲ್ಲಿಸಿ ಮಾತನಾಡಿ ಅಂಬೇಡ್ಕರ್ ರವರು ವಿದೇಶದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್‌ (ಪಿಹೆಚ್‌ಡಿ) ಪದವಿ ಪಡೆದ ಮೊದಲ ಭಾರತೀಯ. ಇವರು ಸುಮಾರು 64 ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದರು ಹಾಗೂ ಒಂಬತ್ತು ಭಾಷೆಗಳನ್ನು ಬಲ್ಲವರಾಗಿದ್ದರು. ವಿಶ್ವದರ್ಜೆಯ ವಕೀಲರು, ಸಾಮಾಜ ಸುಧಾರಕರೂ ಆಗಿದ್ದವರು. ಭಾರತದ ದಲಿತ ಚಳವಳಿಗಳ ಹಿಂದಿನ ಶಕ್ತಿ ಎಂಬ ಹೆಗ್ಗಳಿಕೆಯೂ ಇವರದ್ದು ಎಂದು ಅಂಬೇಡ್ಕರ್ ಅವರ ಜೀವನಗಾಥೆಯನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಕ್ರಿಯೇಟಿವ್‌ ವಿದ್ಯಾಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಲಿಶನ್‌ ಗೌಡ , ಆಡಳಿತಾಧಿಕಾರಿ ಜಯಪ್ರಕಾಶ್‌ ಶೆಟ್ಟಿ, ಉಪನ್ಯಾಸಕರಾದ ಸುಮಂತ ದಾಮ್ಲೆ, ಶಶಿರಾಜ್‌, ಕುಮಾರಿ ಅಕ್ಷತಾ, ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.