ಇಂದ್ರಾಳಿ ಕೊರಗರ ಕಾಲನಿಗೆ ಭೇಟಿ ನೀಡಿದ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಶಾಸಕ ಯಶ್ ಪಾಲ್ ಸುವರ್ಣ ಇಂದು ಇಂದ್ರಾಳಿ ವಾರ್ಡಿನ ಮಂಜುಶ್ರೀ ನಗರದ ಕೊರಗರ ಕಾಲನಿಯ ಮನೆಗಳಿಗೆ ತೆರಳಿ ಅಹವಾಲು ಸ್ವೀಕರಿಸಿ, ಗೆಲುವಿಗೆ ಸಹಕಾರ ನೀಡಿದ ಮತದಾರರಿಗೆ ಧನ್ಯವಾದ ಸಲ್ಲಿಸಿದರು. ಈ ಸಂದರ್ಭದಲ್ಲಿ ವಾರ್ಡಿನ ನಗರಸಭಾ ಸದಸ್ಯ ಅಶೋಕ್ ನಾಯ್ಕ್, ಕೊರಗ ಸಮುದಾಯದ ಪ್ರಮುಖರಾದ ಸುಂದರ ಗುರಿಕಾರ ಹಾಗೂ ಇತರರು ಉಪಸ್ಥಿತರಿದ್ದರು.