ಮರು ಮೌಲ್ಯಮಾಪನ ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ ನಾಲ್ಕನೇ ರ‍್ಯಾಂಕ್

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆಯ ಹೊರಡಿಸಿದ ಮರು ಮೌಲ್ಯಮಾಪನ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಶರಣ್ಯ ಎಸ್. ಹೆಗ್ಡೆ ಇಂಗ್ಲೀಷ್‌ನಲ್ಲಿ 2, ಕನ್ನಡದಲ್ಲಿ1 ಹೆಚ್ಚುವರಿ ಅಂಕ ಪಡೆದು ಒಟ್ಟು 594 ಅಂಕದೊಂದಿಗೆ ರಾಜ್ಯಕ್ಕೆ ನಾಲ್ಕನೇ ಹಾಗೂ ಉಡುಪಿ ಜಿಲ್ಲೆಗೆ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ. ಆಕಾಶ್ ಪೈ ಇಂಗ್ಲೀಷ್‌ನಲ್ಲಿ 3, ವ್ಯವಹಾರ ಅಧ್ಯಯನದಲ್ಲಿ 2 ಅಂಕಗಳನ್ನು ಹೆಚ್ಚುವರಿ ಪಡೆದು ಒಟ್ಟು 593 ಅಂಕಗಳನ್ನು ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ರೋಹಿತ್ ಹೆಗ್ಡೆ ಇಂಗ್ಲೀಷ್‌ನಲ್ಲಿ 6, ರಸಾಯನಶಾಸ್ತ್ರದಲ್ಲಿ 3 ಅಂಕಗಳನ್ನು ಹೆಚ್ಚುವರಿಯಾಗಿ ಪಡೆದು ಒಟ್ಟು 593 ಅಂಕಗಳೊಂದಿಗೆ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದಿದ್ದಾರೆ. ಮನೋಜ್‌ ಎಂ.ಟಿ ರಸಾಯನಶಾಸ್ತ್ರದಲ್ಲಿ 19 ಹೆಚ್ಚುವರಿ ಅಂಕ ಪಡೆದು 548 ಅಂಕ ಪಡೆದಿದ್ದಾರೆ.