ಕಟಪಾಡಿ: ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯ ಸೆ.29 ರಂದು ಸಮಾಪ್ತಿಗೊಳ್ಳಲಿದ್ದು, ಅಂದು ಸೀಮೋಲ್ಲಂಘನ, ದಿಗ್ವಿಜಯ ಮೆರವಣಿಗೆ ಬಳಿಕ ಸಮಾರೋಪ ಸಮಾರಂಭ ನಡೆಯಲಿದೆ.
ವಿಶ್ವಕರ್ಮ ಯಜ್ಞದ ಬಳಿಕ ಮಹಾಸಂಸ್ಥಾನದ ಮಠದ ಸಮೀಪದಲ್ಲಿ ಸೀಮೋಲ್ಲಂಘನ-ದಿಗ್ವಿಜಯ ಮೆರವಣಿಗೆಯ ಮೂಲಕ ಕಟಪಾಡಿ ವೃಂದಾವನ, ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ, ಮಹಾಸಂಸ್ಥಾನದ ಸಂದರ್ಶನ ಸೇವೆ ಸಮರ್ಪಣೆ ಮತ್ತು ಪೂಜೆಯ ನಂತರ ಕಾಪು ಕಾಳಿಕಾಂಬಾ ದೇವಳ ಪಡುಕುತ್ಯಾರು, ಶ್ರೀ ದುರ್ಗಾದೇವಿ ಮಂದಿರವಾಗಿ ಆನೆಗುಂದಿ ಮಠಕ್ಕೆ ಆಗಮಿಸಲಿದ್ದಾರೆ. ನಂತರ ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ಪಾದಪೂಜೆ ನಡೆಯಲಿದ್ದು ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ಸಮಾರೋಪ ಸಮಾರಂಭ ನಡೆಯಲಿದೆ.
ಈ ಸಂದರ್ಭದಲ್ಲಿ ಸ್ವಾಮೀಜಿಗಳು ಆಶೀರ್ವಚನ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಚಾತುರ್ಮಾಸ್ಯ ವೃತ ನಿರ್ವಹಣಾ ಸಮಿತಿ ಅಧ್ಯಕ್ಷ ವಿ ಶ್ರೀಧರ ಆಚಾರ್ಯ ವಹಿಸಲಿದ್ದಾರೆ. ಆಸ್ಥಾನ ವಿದ್ವಾಂಸ ಪಂಜ ಭಾಸ್ಕರ್ ಭಟ್, ಜ್ಯೋತಿಷಿ ವಿದ್ವಾನ್ ಉಮೇಶ್ ಆಚಾರ್ಯ ಪಡೀಲು, ಹುಬ್ಬಳ್ಳಿ ವೇದಬ್ರಹ್ಮ ಶಂಕರಾಚಾರ್ಯ ಗುರುನಾಥಾಚಾರ್ಯ ಕಡ್ಲಾಸ್ಕರ್ ಉಪಸ್ಥಿತಿಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ಸರ್ಕಾರದ ವಿಶ್ರಾಂತ ಕಾರ್ಯದರ್ಶಿ ಕೆ.ಎಸ್ ಪ್ರಭಾಕರ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಂಸ್ಥಾನದ ವಿಶ್ವಕರ್ಮ ಧ್ವಜ ಸಮಿತಿ ಸಂಚಾಲಕ ಯೋಗಾಚಾರ್ಯ ಪುಂಡಾರೀಕಾಕ್ಷ ಬೆಳ್ಳೂರು ಸಮಾಜ ಐಕ್ಯ ಸಂಘಟನೆ ಪ್ರತೀಕ ವಿಶ್ವಕರ್ಮ ಧ್ವಜದ ಬಗ್ಗೆ ಸಂದೇಶ ನೀಡಲಿದ್ದಾರೆ.
ರಾಷ್ಟೀಯ ಚಲನಚಿತ್ರ ಪ್ರಶಸ್ತಿ ವಿಜೇತ ಬಾಡೂರು ಎನ್.ಸುಬ್ರಹ್ಮಣ್ಯ ಇವರಿಗೆ ಗೌರವಾಭಿನಂದನೆ ನಡೆಯಲಿದೆ.
ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ ಪಾಲ್ ಸುವರ್ಣ, ಸುನಿಲ್ ಕುಮಾರ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕ.ವಿ.ಸ.ಅ.ನಿ ನಿಕಟಪೂರ್ವ ಅಧ್ಯಕ್ಷ ಬಾಬು ಪತ್ತಾರ, ಕೋಟ ಅಮೃತೇಶ್ವರಿ ದೇವಳದ ಧರ್ಮದರ್ಶಿ ಆನಂದ ಸಿ ಕುಂದರ್ ಭಾಗವಹಿಸಲಿದ್ದಾರೆ.
ವಿಶ್ವಕರ್ಮ ಸ.ಬ್ಯಾಂ ಅಧ್ಯಕ್ಷ ಡಾ.ಹರೀಶ್ ಆಚಾರ್ಯ, ಎಸ್.ಕೆ.ಜಿ.ಐ ಕೋ-ಆಪ್ ಸೊಸೈಟಿ ಅಧ್ಯಕ್ಷ ಉಪೇಂದ್ರ ಆಚಾರ್ಯ, ವಿಶ್ವಕರ್ಮ ಒಕ್ಕೂಟ ಅವಿಭಜಿತ ದ.ಕ ಜಿಲ್ಲೆಯ ಅಧ್ಯಕ್ಷ ಮಧು ಆಚಾರ್ಯ, ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಗೌರವಾಧ್ಯಕ್ಷ ಪಿವಿ ಗಂಗಾಧರ ಆಚಾರ್ಯ, ಕುತ್ಯಾರು ಗ್ರಾ.ಪಂ ಅಧ್ಯಕ್ಷ ಜನಾರ್ಧನ್ ಆಚಾರ್ಯ ಉಪಸ್ಥಿತರಿರಲಿದ್ದಾರೆ.












